ಮದ್ಯ ಸೇವನೆ – ಯುವತಿಯರಿಂದ ಮತಾಂತರಕ್ಕೆ ಸೆಳೆಯುವ ಹುನ್ನಾರ

Published : Feb 25, 2018, 07:17 PM ISTUpdated : Apr 11, 2018, 12:51 PM IST
ಮದ್ಯ ಸೇವನೆ – ಯುವತಿಯರಿಂದ ಮತಾಂತರಕ್ಕೆ ಸೆಳೆಯುವ ಹುನ್ನಾರ

ಸಾರಾಂಶ

ಮದ್ಯ ಸೇವನೆ ಹಾಗೂ ಯುವತಿಯರ ಜೊತೆ ಕುಣಿಯಲು ಅವಕಾಶ ಕಲ್ಪಿಸುವ ಮೂಲಕ ಮತಾಂತರ ಪ್ರಕ್ರಿಯೆಗೆ ಸೆಳೆಯುವ ಹುನ್ನಾರ ದೇಶದಲ್ಲಿ ನಡೆಯುತ್ತಿದೆ ಎಂದು ಕಾಡಸಿದ್ದೇಶ್ವರ ಸ್ವಾಮೀಜಿ ಹೇಳಿಕೆ ನೀಡಿದ್ದಾರೆ.

ಬೆಳಗಾವಿ : ಮದ್ಯ ಸೇವನೆ ಹಾಗೂ ಯುವತಿಯರ ಜೊತೆ ಕುಣಿಯಲು ಅವಕಾಶ ಕಲ್ಪಿಸುವ ಮೂಲಕ ಮತಾಂತರ ಪ್ರಕ್ರಿಯೆಗೆ ಸೆಳೆಯುವ ಹುನ್ನಾರ ದೇಶದಲ್ಲಿ ನಡೆಯುತ್ತಿದೆ ಎಂದು ಕಾಡಸಿದ್ದೇಶ್ವರ ಸ್ವಾಮೀಜಿ ಹೇಳಿಕೆ ನೀಡಿದ್ದಾರೆ.

ವಿಶ್ವ ಹಿಂದೂ ಪರಿಷತ್ ನಗರದ ಜಿರಗೆ ಸಭಾಭವನದಲ್ಲಿ ಆಯೋಜಿಸಿದ್ದ ಸಂತ ಸಮಾವೇಶದಲ್ಲಿ ಮಾತನಾಡುತ್ತಾ ಈ ವಿಚಾರವನ್ನು ಪ್ರಸ್ತಾಪ ಮಾಡಿದ್ದಾರೆ. ಮಹಾರಾಷ್ಟ್ರದ ಕೊಲ್ಹಾಪುರದ ಕನ್ನೇರಿ ಸಿದ್ಧಗಿರಿ ಮಠದ ಸ್ವಾಮೀಜಿ ಈ ಹೇಳಿಕೆ ನೀಡಿದ್ದಾರೆ. ಕೆಲವು ಯುವಕರು ಮದ್ಯ ಸೇವನೆ ಹಾಗೂ ಯುವತಿಯರ ಜೊತೆ ಕುಣಿಯುವುದಕ್ಕಾಗಿ ಚರ್ಚ್’ಗೆ ಹೋಗುತ್ತಿದ್ದಾರೆ.

ಒಂದು ವೇಳೆ ಈ ಯುವತಿಯರಿಗೆ ಮಾರು ಹೋದ ಯುವಕರಿಗೆ ಕಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡರೆ ಮಾತ್ರ ಮದುವೆ ಅವಕಾಶ ಎನ್ನುವಂತಾಗಿದೆ. ಬ್ರಾಹ್ಮಣರು, ಲಿಂಗಾಯತ ಸಮುದಾಯದಲ್ಲಿಯೂ ಮತಾಂತರ ಹೆಚ್ಚುತ್ತಿದೆ ಎಂದು ಹೇಳಿದ್ದಾರೆ.

ಬೆಳಗಾವಿಯ ವಿಶ್ವ ಹಿಂದೂ ಪರಿಷತ್ ವತಿಯಿಂದ  ಹಿಂದೂ ಸಭೆ ಆರಂಭವಾಗಿದ್ದು, ಇಲ್ಲಿನ ಲಿಂಗರಾಜು ಕಾಲೇಜು ಮೈದಾನದಲ್ಲಿ ನಡೆಸಲಾಗುತ್ತಿದೆ. ಶ್ರೀ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ ಅಧ್ಯಕ್ಷತೆಯಲ್ಲಿ ಸಭೆ ನಡೆಸಲಾಗುತ್ತಿದೆ. ನೂರಕ್ಕೂ ಅಧಿಕ ಸ್ವಾಮೀಜಿಗಳು ಈ ಸಭೆಯಲ್ಲಿ ಪಾಲ್ಗೊಂಡಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ದೇಗುಲಗಳಿಗೆ ಸಬ್ಸಿಡಿ ದರದಲ್ಲಿ ಟಿಟಿಡಿ ಮೈಕ್‌, ವಿಗ್ರಹ
ಎಪ್ಸ್ಟೀನ್‌ ಸೆ* ಫೈಲ್‌ಗಳಲ್ಲಿ ಕ್ಲಿಂಟನ್‌, ಜಾಕ್ಸನ್‌ ಫೋಟೋ