
ನವದೆಹಲಿ (ಸೆ.24): ವಿಶ್ವಸಂಸ್ಥೆಯಲ್ಲಿ ಪಾಕಿಸ್ತಾನದ ಮಾನವನ್ನು ಹರಾಜು ಹಾಕಿದ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್'ಗೆ ಪಾಕ್ ಪ್ರತ್ಯುತ್ತರ ನೀಡಿದೆ. ದಕ್ಷಿಣ ಏಷಿಯಾದಲ್ಲಿ ಭಾರತ ಭಯೋತ್ಪಾದನೆಯ ತಾಯಿ. ಜನಾಂಗೀಯ ಹಾಗೂ ಫ್ಯಾಸಿಸ್ಟ್ ಸಿದ್ಧಾಂತಗಳು ನರೇಂದ್ರ ಮೋದಿ ಸರ್ಕಾರದಲ್ಲಿ ಮಿಳಿತವಾಗಿದೆ ಎಂದು ಪಾಕ್ ರಾಯಭಾರಿ ಮಲೀಹಾ ಲೋಧಿ ಹೇಳಿದ್ದಾರೆ.
ಅಂತರಾಷ್ಟ್ರೀಯ ಸಮುದಾಯಗಳು ಭಾರತ-ಪಾಕಿಸ್ತಾನ ನಡುವಿನ ಅಪಾಯವನ್ನು ತಡೆಯಲು ಇಚ್ಚಿಸುವುದಾದರೆ ಮೊದಲು ಭಾರತದ ಪ್ರಚೋದನಾಕಾರಿ ಹಾಗೂ ಆಕ್ರಮಣಕಾರಿ ನಡೆಯನ್ನು ತಡೆಯಬೇಕು. ಗಡಿ ನಿಯಂತ್ರಣ ರೇಖೆಯಲ್ಲಿ ಭಾರತ ಪದೇ ಪದೇ ಕದನ ವಿರಾಮ ಉಲ್ಲಂಘನೆ ಮಾಡುತ್ತಿದೆ. ಇದನ್ನು ನಿಯಂತ್ರಿಸಬೇಕು. ಪಾಕಿಸ್ತಾನದ ವಿರುದ್ಧ ಭಯೋತ್ಪಾದಕ ಸಂಘಟನೆಗಳಿಗೆ ಭಾರತ ಸ್ಪಾನ್ಸರ್ ಮಾಡುತ್ತಿದೆ. ಇದನ್ನು ನಿಲ್ಲಿಸಬೇಕು ಎಂದು ಪಾಕ್ ಹೇಳಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.