
ಚಿಂದ್ವಾರ (ಮ.ಪ್ರ)(ಡಿ.14): ‘‘ದೇಶದ ಯುವಕರು ನಿರುದ್ಯೋಗಿಗಳಾಗಿ ಮುಂದುವರಿದರೆ ‘ಅಶಾಂತಿ ಹಾಗೂ ಹತಾಶೆ’ ಹೆಚ್ಚಾಗಲಿದೆ. ಆದ್ದರಿಂದ ಯುವಕರಿಗೆ ಕೌಶಲಯುತ ಕೆಲಸಗಳನ್ನು ಕಲಿಸುವಲ್ಲಿ ಗಮನ ನೀಡಬೇಕು,’’ ಎಂದು ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅಭಿಪ್ರಾಯಪಟ್ಟಿದ್ದಾರೆ. ಮಧ್ಯಪ್ರದೇಶದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘‘ಯುವಕರು ದೇಶದ ಆಸ್ತಿಯಿದ್ದಂತೆ. ಆದರೆ, ಬಹುತೇಕ ಪದವೀಧರರು ನಿರುದ್ಯೋಗಿಗಳಾಗುತ್ತಿದ್ದಾರೆ’’ ಎಂದು ವಿಷಾದಿಸಿದ್ದಾರೆ. ಭಾರತದಲ್ಲಿ ಅರ್ಧದಷ್ಟು ಮಂದಿ 25 ವರ್ಷದೊಳಗಿನವರು. ಹೀಗಾಗಿ, ಮುಂದಿನ ದಿನಗಳಲ್ಲಿ ದೇಶ ಬಹುದೊಡ್ಡ ಸವಾಲನ್ನು ಎದುರಿಸಲಿದೆ,’’ ಎಂದೂ ಎಚ್ಚರಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.