2047 ರಲ್ಲಿ ಮತ್ತೆ ಭಾರತ ಇಬ್ಭಾಗ: ಸಿಂಗ್ ಹೇಳಿಕೆಗೆ ನಡುಗಿದ ದೇಶ!

Published : Sep 17, 2018, 10:35 AM ISTUpdated : Sep 19, 2018, 09:27 AM IST
2047 ರಲ್ಲಿ ಮತ್ತೆ ಭಾರತ ಇಬ್ಭಾಗ: ಸಿಂಗ್ ಹೇಳಿಕೆಗೆ ನಡುಗಿದ ದೇಶ!

ಸಾರಾಂಶ

2047 ರಲ್ಲಿ ಭಾರತ ಮತ್ತೆ ಇಬ್ಭಾಗವಾಗುತ್ತಂತೆ! ವಿಧ್ವಂಸಕ ಶಕ್ತಿಗಳ ಜನಸಂಖ್ಯೆಯಲ್ಲಿ ಹೆಚ್ಚಳ! ಕೇಂದ್ರ ಸಚಿವ ಗಿರಿರಾಜ್ ಸಿಂಗ್ ವಿವಾದಾತ್ಮಕ ಹೇಳಿಕೆ! ಮತ್ತೊಮ್ಮೆ ಧರ್ಮದ ಆಧಾರದಲ್ಲಿ ಭಾರತ ಇಬ್ಭಾಗ! ಸಚಿವರ ಹೇಳಿಕೆಯಿಂದ ಅಂತರ ಕಾಯ್ದುಕೊಂಡ ಕೇಂದ್ರ 

ನವದೆಹಲಿ(ಸೆ.17): 2047 ರ ವೇಳೆಗೆ  ಭಾರತ ಮತ್ತೆ ಇಬ್ಭಾಗವಾಗಲಿದೆ ಎಂದು ಕೇಂದ್ರ ಸಚಿವ ಗಿರಿರಾಜ್ ಸಿಂಗ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. 

1947 ರಲ್ಲಿ ಭಾರತ ಧಾರ್ಮಿಕ ಆಧಾರದಲ್ಲಿ ಇಬ್ಭಾಗಗೊಂಡಿತ್ತು,  72 ವರ್ಷಗಳಲ್ಲಿ ದೇಶದ ಜನಸಂಖ್ಯೆ 33 ಕೋಟಿಯಿಂದ 135.7 ಕೋಟಿಗೆ ಏರಿಕೆಯಾಗಿದೆ. ಈ ಹಿನ್ನೆಲೆಯಲ್ಲಿ 2047 ರಲ್ಲಿ ಭಾರತ ಮತ್ತೆ ಇಬ್ಭಾಗವಾಗಲಿದೆ ಎಂದು ಸಿಂಗ್ ಅಭಿಪ್ರಾಯಪಟ್ಟಿದ್ದಾರೆ.

ಯಾವುದೇ ಸಮುದಯವನ್ನು ಹೆಸರಿಸದೇ ಇಂತಹ ಆಘಾತಕಾರಿ ಹೇಳಿಕೆ ನೀಡಿರುವ ಕೇಂದ್ರ ಸಚಿವ, ವಿಧ್ವಂಸಕ ಶಕ್ತಿಗಳ ಜನಸಂಖ್ಯೆಯಲ್ಲಿ ಹೆಚ್ಚಳವಾಗಿರುವುದು ಭಯಾನಕವಾಗಿದೆ ಎಂದು ಟ್ವಿಟರ್ ನಲ್ಲಿ ಬರೆದಿದ್ದಾರೆ.

 

ಜಮ್ಮು-ಕಾಶ್ಮೀರದ ಸ್ಥಳೀಯ ನಿವಾಸಿಗಳಿಗೆ ವಿಶೇಷ ಸೌಲಭ್ಯ, ಹಕ್ಕುಗಳನ್ನು ನೀಡುವ ಆರ್ಟಿಕಲ್ 35ಎ ಬಗ್ಗೆಯೂ ಉಲ್ಲೇಖಿಸಿರುವ ಕೇಂದ್ರ ಸಚಿವರು, 1947 ರಲ್ಲಿ ಭಾರತ ಧಾರ್ಮಿಕ ಆಧಾರದಲ್ಲಿ ಇಬ್ಭಾಗವಾಯಿತು. 2047 ರಲ್ಲಿ ಇಂತಹದ್ದೇ ಘಟನೆ ಮತ್ತೊಮ್ಮೆ ನಡೆಯಲಿದೆ, ಮುಂದೆ ಭಾರತಕ್ಕೆ ಬರುವ ಸ್ಥಿತಿಯನ್ನು ಹೇಳುವುದಕ್ಕೂ ಸಾಧ್ಯವಿಲ್ಲ ಎಂದು ಗಿರಿರಾಜ್ ಸಿಂಗ್ ಆತಂಕ ವ್ಯಕ್ತಪಡಿಸಿದ್ದಾರೆ.

ಇನ್ನು ಗಿರಿರಾಜ್ ಸಿಂಗ್ ಹೇಳಿಕೆ ರಾಜಕೀಯ ವಲಯದಲ್ಲಿ ಅಲ್ಲೋಲಕಲ್ಲೋಲ ಸೃಷ್ಟಿಸಿದ್ದು, ಸಚಿವ ಸ್ಥಾನದಲ್ಲಿದ್ದು ಇಂತಹ ಬೇಜವಾಬ್ದಾರಿ ಹೇಳಿಕೆ ನೀಡಿರುವ ಗಿರಿರಾಜ್ ಸಿಂಗ್ ವಿರುದ್ಧ ಕಠಿಣ ಕ್ರಮಕ್ಕೆ ಪ್ರತಿಪಕ್ಷಗಳು ಆಗ್ರಹಿಸಿವೆ. ಇದೇ ವೇಳೆ ಗಿರಿರಾಜ್ ಸಿಂಗ್ ಹೇಳಿಕೆಯಿಂದ ಅಂತರ ಕಾಯ್ದುಕೊಂಡಿರುವ ಬಿಜೆಪಿ, ಇದು ಸಚಿವರ ವೈಯಕ್ತಿಕ ಅಭಿಪ್ರಾಯ ಎಂದು ಸ್ಪಷ್ಟಪಡಿಸಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಹಾಸನದ ತಿರುಪತಿಹಳ್ಳಿ ಬೆಟ್ಟದ ಮೇಲೆ 50ಕ್ಕೂ ಅಧಿಕ ಉಲ್ಕೆಗಳ ಸುರಿಮಳೆ!
India Latest News Live: ಪಹಲ್ಗಾಂ ಉಗ್ರ ದಾಳಿ: ಕೋರ್ಟ್‌ಗೆ 1597 ಪುಟಗಳ ಚಾರ್ಜ್‌ಶೀಟ್‌ ಸಲ್ಲಿಕೆ