ಕಣಿವೆಯಲ್ಲಿ 'ಅಮಾನವೀಯ ವರ್ತನೆ': ವಿಶ್ವಸಂಸ್ಥೆ ವರದಿಗೆ ಭಾರತ ವಿರೋಧ!

Published : Jul 08, 2019, 04:29 PM IST
ಕಣಿವೆಯಲ್ಲಿ 'ಅಮಾನವೀಯ ವರ್ತನೆ': ವಿಶ್ವಸಂಸ್ಥೆ ವರದಿಗೆ ಭಾರತ ವಿರೋಧ!

ಸಾರಾಂಶ

ವಿಶ್ವಸಂಸ್ಥೆ ಮಾನವ ಹಕ್ಕು ಸಮಿತಿ ವರದಿ ಬಹಿರಂಗ| ಕಣಿವೆಯಲ್ಲಿ ಮಾನವ ಹಕ್ಕು ಉಲ್ಲಂಘನೆ ಎಂದ ಸಮಿತಿ| ವರದಿ ಕಂಡು ಕೆರಳ ಕೆಂಡಾಮಂಡಲವಾದ ಭಾರತ| ವಿಶ್ವಸಂಸ್ಥೆಯ ವರದಿಗೆ ಭಾರತದ ತೀವ್ರ ವಿರೋಧ| ಭಯೋತ್ಪಾದನೆಯನ್ನು ಕಾನೂನುಬದ್ಧಗೊಳಿಸುವ ಪ್ರಯತ್ನ ಎಂದ ಭಾರತ| ಮಾನವ ಹಕ್ಕು ಸಮಿತಿ ವರದಿ ತಿರಸ್ಕರಿಸಿದ ವಿದೇಶಾಂಗ ಇಲಾಖೆ|

ನವದೆಹಲಿ(ಜು.08): ಜಮ್ಮು ಮತ್ತು ಕಾಶ್ಮೀರದಲ್ಲಿ ಮಾನವ ಹಕ್ಕು ಉಲ್ಲಂಘನೆ ಕುರಿತು ವಿಶ್ವಸಂಸ್ಥೆಯ ಮಾನವ ಹಕ್ಕು ಸಮಿತಿ ನೀಡಿರುವ ವರದಿಗೆ ಭಾರತ ತೀವ್ರ ವಿರೋಧ ವ್ಯಕ್ತಪಡಿಸಿದೆ.

ಜಮ್ಮು ಮತ್ತು ಕಾಶ್ಮೀರದಲ್ಲಿ ಸರ್ಕಾರ ಮತ್ತು ಸೇನೆಯಿಂದ ಮಾನವ ಹಕ್ಕು ಉಲ್ಲಂಘನೆಯಾಗಿದ್ದು, ಈ ಕುರಿತು ವಿಶ್ವ ಸಮುದಾಯ ಗಮನ ಹರಿಸುವ ಅವಶ್ಯಕತೆ ಇದೆ ಎಂದು ವಿಶ್ವಸಂಸ್ಥೆ ಮಾನವ ಹಕ್ಕು ಸಮಿತಿ ವರದಿ ಮಾಡಿದೆ.

ಇದಕ್ಕೆ ತೀಕ್ಷ್ಣ ಪ್ರತಿಕ್ರಿಯೆ ನೀಡಿರುವ ಭಾರತ, ಮಾನವ ಹಕ್ಕುಗಳ ನೆರಳಲ್ಲಿ ಭಯೋತ್ಪಾದನೆಯನ್ನು ಕಾನೂನುಬದ್ಧಗೊಳಿಸುವ ಅಪಾಯ ಎದುರಾಗಿದೆ ಎಂದು ಗಂಭೀರ ಆರೋಪ ಮಾಡಿದೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ವಿದೇಶಾಂಗ ಇಲಾಖೆ, ಭಾರತದ ಆಂತರಿಕ ವಿಷಯದಲ್ಲಿ ವಿಶ್ವಸಂಸ್ಥೆ ಅನಗತ್ಯ ಹಸ್ತಕ್ಷೇಪ ಮಾಡುತ್ತಿರುವುದು ಒಪ್ಪಲು ಸಾಧ್ಯವಿಲ್ಲ ಎಂದು ಖಾರವಾಗಿ ನುಡಿದಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
ಗೃಹಲಕ್ಷ್ಮೀ ಯೋಜನೆ ಹಣ ಬಾಕಿ ಇದ್ರೆ ಕೂಡಲೇ ಬಿಡುಗಡೆ: ಸಿಎಂ ಸಿದ್ದರಾಮಯ್ಯ ಭರವಸೆ