ಪಾಕ್’ನಿಂದ ಬುರ್ಹಾನ್ ವಾನಿಗೆ ಪ್ರಶಂಸೆ; ಭಾರತ ಖಂಡನೆ

Published : Jul 09, 2017, 06:29 PM ISTUpdated : Apr 11, 2018, 12:56 PM IST
ಪಾಕ್’ನಿಂದ ಬುರ್ಹಾನ್ ವಾನಿಗೆ ಪ್ರಶಂಸೆ; ಭಾರತ ಖಂಡನೆ

ಸಾರಾಂಶ

ಕಳೆದ ವರ್ಷ ಕಾಶ್ಮೀರದಲ್ಲಿ  ಭದ್ರತಾ ಪಡೆಗಳ ಗುಂಡಿಗೆ ಬಲಿಯಾದ ಉಗ್ರ ಬುರ್ಹಾನ್ ವಾನಿಯನ್ನು ವೈಭವೀಕರಿಸಿದ ಪಾಕಿಸ್ತಾನದ ವಿರುದ್ಧ ಭಾರತ ಹರಿಹಾಯ್ದಿದೆ. ಪಾಕಿಸ್ತಾನವು ಭಯೋತ್ಪಾದನೆಗೆ ನೀಡುತ್ತಿರುವ ಕುಮ್ಮಕ್ಕು ಹಾಗೂ ಬೆಂಬಲವನ್ನು ಎಲ್ಲರೂ ಖಂಡಿಸಬೇಕಾಗಿದೆ ಎಂದು ಭಾರತ ಹೇಳಿದೆ.

ನವದೆಹಲಿ (ಜು. 09): ಕಳೆದ ವರ್ಷ ಕಾಶ್ಮೀರದಲ್ಲಿ  ಭದ್ರತಾ ಪಡೆಗಳ ಗುಂಡಿಗೆ ಬಲಿಯಾದ ಉಗ್ರ ಬುರ್ಹಾನ್ ವಾನಿಯನ್ನು ವೈಭವೀಕರಿಸಿದ ಪಾಕಿಸ್ತಾನದ ವಿರುದ್ಧ ಭಾರತ ಹರಿಹಾಯ್ದಿದೆ.

ಪಾಕಿಸ್ತಾನವು ಭಯೋತ್ಪಾದನೆಗೆ ನೀಡುತ್ತಿರುವ ಕುಮ್ಮಕ್ಕು ಹಾಗೂ ಬೆಂಬಲವನ್ನು ಎಲ್ಲರೂ ಖಂಡಿಸಬೇಕಾಗಿದೆ ಎಂದು ಭಾರತ ಹೇಳಿದೆ.

 

ಪಾಕಿಸ್ತಾನವು ಬುರ್ಹಾನ್ ವಾನಿಯನ್ನು ವೈಭವೀಕರಿಸುತ್ತಿದೆ. ಪಾಕ್ ಭಯೋತ್ಪಾದನೆಗೆ ನೀಡುತ್ತಿರುವ ಬೆಂಬಲವನ್ನು ಎಲ್ಲರೂ ಖಂಡಿಸಬೇಕು, ಎಂದು ವಿದೇಶಾಂಗ ವ್ಯವಹಾರ ಇಲಾಖೆಯ ವಕ್ತಾರ ಗೋಪಾಲ್ ಬಾಗ್ಲೆ ಹೇಳಿದ್ದಾರೆ.

ಪಾಕಿಸ್ತಾನ ಪ್ರಧಾನಿ ನಿನ್ನೆ ಬುರ್ಹಾನಿ ವಾನಿಗೆ ಶ್ರದ್ಧಾಂಜಲಿ ಅರ್ಪಿಸಿ, ಕಾಶ್ಮೀರದ ಸ್ವಾತಂತ್ರ್ಯ ಹೋರಾಟಕ್ಕೆ ಆತ ಸ್ಫೂರ್ತಿಯಾಗಿದ್ದಾನೆಂದು ಹೊಗಳಿದ್ದರು. ಇನ್ನೊಂದು ಕಡೆ ಪಾಕ್ ಸೇನಾ ಮುಖ್ಯಸ್ಥ ಜನರಲ್ ಖಮರ್ ಜಾವೇದ್ ಬಾಜ್ವಾ ಕೂಡಾ ನಿನ್ನೆ ಬುರ್ಹಾನ್ ವಾನಿಯನ್ನು ಪ್ರಶಂಸಿದ್ದರು.

ಹಿಝ್ಬುಲ್ ಮುಜಾಹಿದೀನ್ ಕಮಾಂಡರ್ ಆಗಿದ್ದ ಬುರ್ಹಾನ್ ವಾನಿ ಭಾರತೀಯ ಸೇನಾಪಡೆಗಳ ಮೇಲೆ ಹಲವು ದಾಳಿಗಳನ್ನು ನಡೆಸಿದ್ದನು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸಿಎಂ ಹೇಳಿದ ಮೇಲೂ ಅಧಿಕಾರ ಹಂಚಿಕೆ ಬಗ್ಗೆ ಚರ್ಚೆ ಸಲ್ಲ: ಸಚಿವ ಸತೀಶ್‌ ಜಾರಕಿಹೊಳಿ
ಓಲಾ ಸ್ಕೂಟರ್ಸ್‌ ಮಾತ್ರವಲ್ಲ, ಸರ್ವೀಸ್‌ ವಿಚಾರದಲ್ಲಿ ಮೋಟಾರ್‌ಸೈಕಲ್‌ದೂ ಅದೇ ಕಥೆ!