ಇಫ್ತಾರ್ ಅತಿಥಿಗಳಿಗೆ ತಡೆ: ಪಾಕ್ ವಿರುದ್ಧ ಸಿಡಿದೆದ್ದ ಭಾರತ!

Published : Jun 02, 2019, 08:00 PM IST
ಇಫ್ತಾರ್ ಅತಿಥಿಗಳಿಗೆ ತಡೆ: ಪಾಕ್ ವಿರುದ್ಧ ಸಿಡಿದೆದ್ದ ಭಾರತ!

ಸಾರಾಂಶ

ಭಾರತದ ರಾಯಭಾರಿ ಕರೆದ ಇಫ್ತಾರ್ ಕೂಟದ ಅತಿಥಿಗಳನ್ನು ತಡೆದ ಪಾಕ್| ಇಸ್ಲಾಮಾಬಾದ್‌ನಲ್ಲಿ ಇಫ್ತಾರ್ ಕೂಟ ಆಯೋಜಿಸಿದ್ದ ಅಜಯ್ ಬಿಸಾರಿಯಾ| ಹೊಟೇಲ್ ಸೆರೆನಾ ಸುತ್ತುವರೆದು ಅತಿಥಿಗಳನ್ನು ತಡೆದ ಪಾಕ್ ಅಧಿಕಾರಿಗಳು| ಪಾಕ್ ಉದ್ಘಟತನವನ್ನು ತೀವ್ರ ವಿರೋಧಿಸಿದ ಭಾರತ| ಪಾಕಿಸ್ತಾನ ಅನಾಗರಿಕ ವರ್ತನೆ ತೋರಿದೆ ಎಂದ ಭಾರತ| ಸೂಕ್ತ ತನಿಖೆಗೆ ಪಾಕ್‌ನ್ನು ಒತ್ತಾಯಿಸಿದ ಭಾರತ|

ನವದೆಹಲಿ(ಜೂ.02): ಪಾಕಿಸ್ತಾನಕ್ಕೆ ಭಾರತದ ರಾಯಭಾರಿ ಅಜಯ್ ಬಿಸಾರಿಯಾ ಕರೆದಿದ್ದ ಇಫ್ತಾರ್ ಕೂಟಕ್ಕೆ ಭಂಗ ಉಂಟು ಮಾಡಿರುವ ಪಾಕಿಸ್ತಾನ, ಇಫ್ತಾರ್ ಕೂಟದ ಅತಿಥಿಗಳನ್ನು ತಡೆದು ಉದ್ಘಟತನ ಮೆರೆದಿದೆ.

ಇಸ್ಲಾಮಾಬಾದ್‌ನಲ್ಲಿರುವ ಹೋಟೆಲ್ ಸೆರೆನಾದಲ್ಲಿ ಭಾರತದ ರಾಯಭಾರಿ ಅಜಯ್ ಬಿಸಾರಿಯಾ ಇಫ್ತಾರ್ ಕೂಟವನ್ನು ಆಯೋಜಿಸಿದ್ದರು. ಆದರೆ ಸೆರೆನಾ ಹೋಟೆಲ್‌ನ್ನು ಸುತ್ತುವರೆದ ಪಾಕ್ ಅಧಿಕಾರಿಗಳು, ಇಫ್ತಾರ್ ಕೂಟಕ್ಕೆ ಬಂದ ಅತಥಿಗಳನ್ನು ವಾಪಸ್ ಕಳುಹಿಸಿದರು.

ಪಾಕಿಸ್ತಾನದ ಉದ್ಘಟತನವನ್ನು ತೀವ್ರ ವಿರೋಧಿಸಿರುವ ಭಾರತ, ಪಾಕ್ ಅನಾಗರಿಕ ವರ್ತನೆ ತೋರಿದೆ ಎಂದು ಕಟು ಶಬ್ಧಗಳಿಂದ ಟೀಕಿಸಿದೆ.

ಈ ಕುರಿತು ಪತ್ರ ಬರೆದಿರುವ ಅಜಯ್ ಬಿಸಾರಿಯಾ, ಪಾಕಿಸ್ತಾನದ ವರ್ತನೆ ನಾಗರಿಕ ಸಮಾಜಕ್ಕೆ ಶೋಭೆ ತರುವಂತದ್ದಲ್ಲ ಎಂದು ಅಸಮಾಧಾನ ಹೊರ ಹಾಕಿದ್ದಾರೆ.

ರಾಯಭಾರಿ ಹಕ್ಕಿನ ಉಲ್ಲಂಘನೆ ಮಾಡಿರುವ ಪಾಕಿಸ್ತಾನ ಈ ಕುರಿತು ಸೂಕ್ತ ತನಿಖೆ ನಡೆಸಲಿದೆ ಎಂದು ಭಾರತ ಭರವಸೆ ವ್ಯಕ್ತಪಡಿಸಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

11 ನಿಮಿಷ ಉಸಿರು ಚೆಲ್ಲಿ ಬದುಕಿದ ಮಹಿಳೆ: ಸ್ವರ್ಗ- ನರಕದ ನಂಬಲಾಗದ ಅನುಭವ ಬಿಚ್ಚಿಟ್ಟಿದ್ದು ಹೀಗೆ
DRDO ನೇಮಕಾತಿ, ಬರೋಬ್ಬರಿ 764 ತಾಂತ್ರಿಕ ಸಹಾಯಕ, ತಂತ್ರಜ್ಞ ಹುದ್ದೆಗಳಿಗೆ ಅರ್ಹರಿಂದ ಅರ್ಜಿ ಆಹ್ವಾನ