
ನವದೆಹಲಿ[ಏ.19]: ಜಮ್ಮು ಮತ್ತು ಕಾಶ್ಮೀರದಲ್ಲಿ ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನದೊಂದಿಗೆ ನಡೆಸುತ್ತಿದ್ದ ವಹಿವಾಟನ್ನು ಭಾರತ ಸರ್ಕಾರ ಸ್ಥಗಿತಗೊಳಿಸಿದೆ.
ಈ ಮಾರ್ಗವನ್ನು ಶತ್ರುದೇಶದ ಕೆಲ ವಿಧ್ವಂಸಕ ಶಕ್ತಿಗಳು, ಭಾರತಕ್ಕೆ ಶಸ್ತ್ರಾಸ್ತ್ರ ಕಳ್ಳಸಾಗಣೆ, ಮಾದಕ ವಸ್ತು, ನಕಲಿ ನೋಟುಗಳ ಕಳ್ಳಸಾಗಣೆಗೆ ಬಳಸುತ್ತಿರುವುದು ಕಂಡುಬಂದ ಹಿನ್ನೆಲೆಯಲ್ಲಿ ಸರ್ಕಾರ ಈ ಕಠಿಣ ಕ್ರಮ ಕೈಗೊಂಡಿದೆ.
ಇವುಗಳನ್ನು ತಡೆಯಲು ಸೂಕ್ತ ವ್ಯವಸ್ಥೆ ಜಾರಿಗೊಳಿಸಿದ ಬಳಿಕ ಮತ್ತೆ ವಹಿವಾಟು ಪುನಾರಂಭದ ಬಗ್ಗೆ ನಿರ್ಧರಿಸಲಾಗುವುದು ಎಂದು ಸರ್ಕಾರ ಹೇಳಿದೆ. ವಾರದಲ್ಲಿ ನಾಲ್ಕು ದಿನ ಉಭಯ ದೇಶಗಳ ಗಡಿ ಪ್ರದೇಶದಲ್ಲಿ ಯಾವುದೇ ಸುಂಕ ಇಲ್ಲದೆಯೇ ವ್ಯಾಪಾರ ವಹಿವಾಟಿಗೆ ಉಭಯ ದೇಶಗಳು ಅವಕಾಶ ಕಲ್ಪಿಸಿವೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.