ಭಾರತ ನೀಡಿದ್ದ ಗುಪ್ತಚರ ವರದಿ ನಿರ್ಲಕ್ಷಿಸಿದ್ದಕ್ಕೆ ಲಂಕಾ ಕ್ಷಮೆಯಾಚನೆ

Published : Apr 24, 2019, 07:44 AM IST
ಭಾರತ ನೀಡಿದ್ದ ಗುಪ್ತಚರ ವರದಿ ನಿರ್ಲಕ್ಷಿಸಿದ್ದಕ್ಕೆ ಲಂಕಾ ಕ್ಷಮೆಯಾಚನೆ

ಸಾರಾಂಶ

ಭಾರತ ನೀಡಿದ್ದ ಗುಪ್ತಚರ ವರದಿ ನಿರ್ಲಕ್ಷಿಸಿದ್ದಕ್ಕೆ ಲಂಕಾ ಕ್ಷಮೆಯಾಚನ| ದಾಳಿಯಲ್ಲಿ ಸಿಲುಕಿದ ಕುಟುಂಬಸ್ಥರಿಗೆ ಸರ್ಕಾರದಿಂದ ಪರಿಹಾರ| ದಾಳಿಗೆ ತುತ್ತಾದ ಚಚ್‌ರ್‍ಗಳ ಪುನರ್‌ ನಿರ್ಮಾಣ ಮಾಡುತ್ತೇವೆ| ಶ್ರೀಲಂಕಾ ಆರೋಗ್ಯ ಸಚಿವ ರಜಿತಾ ಸೇನಾರತ್ನೆ ಪ್ರತಿಪಾದನೆ| ಈ ದಾಳಿಯಲ್ಲಿ ಬಾಹ್ಯ ಉಗ್ರರು ಭಾಗಿಯಾಗಿರುವ ಸಾಧ್ಯತೆ

ಕೊಲಂಬೋ[ಏ.24]: ಶ್ರೀಲಂಕಾದಲ್ಲಿ ಉಗ್ರರು ಭೀಕರ ದಾಳಿಗೆ ಯೋಜಿಸಿದ್ದಾರೆ ಎಂಬ ಭಾರತದ ಗುಪ್ತಚರ ನೀಡಿದ ಮಾಹಿತಿಯನ್ನು ನಿರ್ಲಕ್ಷ್ಯ ಮಾಡದೇ ಇದ್ದಿದ್ದರೆ ಈ ದಾಳಿಯನ್ನು ತಡೆಯಬಹುದಿತ್ತು ಎಂಬ ರೀತಿಯಲ್ಲಿ ಶ್ರೀಲಂಕಾ ಸರ್ಕಾರ ಪಶ್ಚಾತ್ತಾಪದ ಮಾತುಗಳನ್ನಾಡಿದೆ.

ಉಗ್ರರು ಭಾರೀ ಕೃತ್ಯಕ್ಕೆ ಯೋಜನೆ ರೂಪಿಸಿರಬಹುದಾದ ಸಾಧ್ಯತೆಯಿದೆ. ಈ ಬಗ್ಗೆ ಎಚ್ಚರವಾಗಿರುವಂತೆ ಭಾರತದ ಗುಪ್ತಚರ ಮಾಹಿತಿಯನ್ನು ನಿರ್ಲಕ್ಷ್ಯ ಮಾಡಿದ್ದರಿಂದಲೇ ಈ ದುರಂತಕ್ಕೆ ಒಳಗಾಗಬೇಕಾಯಿತು. ಹೀಗಾಗಿ, ತಮ್ಮ ನಿರ್ಲಕ್ಷ್ಯಕ್ಕಾಗಿ ಕ್ಷಮೆ ಕೋರುವುದಾಗಿ ಶ್ರೀಲಂಕಾ ಸರ್ಕಾರ ಹೇಳಿಕೊಂಡಿದೆ.

ಈ ಬಗ್ಗೆ ಮಂಗಳವಾರ ಮಾತನಾಡಿದ ಶ್ರೀಲಂಕಾ ಸರ್ಕಾರದ ವಕ್ತಾರ ಹಾಗೂ ಆರೋಗ್ಯ ಸಚಿವರೂ ಆಗಿರುವ ರಜಿತಾ ಸೇನರತ್ನೆ ಅವರು, ‘ಶ್ರೀಲಂಕಾದಲ್ಲಿ ಸರಣಿ ಬಾಂಬ್‌ ಸ್ಫೋಟ ಘಟನೆಗಳು ನಡೆಯುತ್ತವೆ ಎಂಬ ಮಾಹಿತಿಯನ್ನು ಭಾರತ ನೀಡಿತ್ತು. ಈ ಎಚ್ಚರಿಕೆಯನ್ನು ನಾವು ಗಮನಿಸಿದ್ದೆವು. ಆದರೂ ನಿರ್ಲಕ್ಷ್ಯ ವಹಿಸಿದೆವು. ಹೀಗಾಗಿ, ಈ ಘಟನೆಯಲ್ಲಿ ಮಡಿದವರ ಕುಟುಂಬ ಮತ್ತು ಬಾಂಬ್‌ ದಾಳಿಗೆ ತುತ್ತಾಗಿರುವ ಸಂಸ್ಥೆಗಳ ಕ್ಷಣೆ ಕೋರುತ್ತೇವೆ,’ ಎಂದು ತಿಳಿಸಿದರು. ಅಲ್ಲದೆ, ಈ ಘಟನೆಯಲ್ಲಿ ಸಿಲುಕಿಕೊಂಡ ಎಲ್ಲ ಕುಟುಂಬಗಳಿಗೂ ಪರಿಹಾರ ನೀಡುತ್ತೇವೆ. ದಾಳಿಯಿಂದ ಧ್ವಂಸವಾಗಿರುವ ಚಚ್‌ರ್‍ ಅನ್ನು ಮತ್ತೆ ನಿರ್ಮಿಸುತ್ತೇವೆ ಎಂದು ಅವರು ಇದೇ ವೇಳೆ ಹೇಳಿದ್ದಾರೆ.

ಭಾರತೀಯ ದೂತಾವಾಸ ಮತ್ತು ಪ್ರಮುಖ ಸ್ಥಳಗಳ ಮೇಲೆ ದಾಳಿ ನಡೆಯುವ ಸಾಧ್ಯತೆ ಇದೆ ಎಂದು ಘಟನೆಗೆ 10 ದಿನ ಮೊದಲೇ ಭಾರತದ ಗುಪ್ತಚರ ಸಂಸ್ಥೆಗಳು ಲಂಕಾ ಸರ್ಕಾರಕ್ಕೆ ಮುನ್ನೆಚ್ಚರಿಕೆ ನೀಡಿದ್ದವು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕೆನಡಾದ ಮಹಿಳಾ ವೈದ್ಯರಿಗೆ ತೋರಿಸಬಾರದನ್ನು ತೋರಿಸಿದ ಭಾರತೀಯ ಯುವಕನ ಬಂಧನ
ವೃದ್ಧೆಯ ಕೇರ್ ಟೇಕರ್‌ನಿಂದಲೇ ₹31 ಲಕ್ಷ ಮೌಲ್ಯದ ಚಿನ್ನಾಭರಣ ಕಳವು: ಬಿಹಾರ ಮೂಲದ ಚಾಂದಿನಿ ಬಂಧನ!