ವೈದ್ಯಕೀಯ ತಪಾಸಣೆಗೆ ಅಭಿನಂದನ್: ವಾಯುಸೇನೆ!

Published : Mar 01, 2019, 10:13 PM IST
ವೈದ್ಯಕೀಯ ತಪಾಸಣೆಗೆ ಅಭಿನಂದನ್: ವಾಯುಸೇನೆ!

ಸಾರಾಂಶ

ತಾಯ್ನಾಡಿಗೆ ಮರಳಿದ ಭಾರತಾಂಬೆಯ ವೀರ ಪುತ್ರ| ವಾಘಾ ಗಡಿ ಮೂಲಕ ಭಾರತಕ್ಕೆ ಬಂದ ವಿಂಗ್ ಕಮಾಂಡರ್ ಅಭಿನಂದನ್| ಅಭಿನಂದನ್ ಅವರನ್ನು ಸುಪರ್ದಿಗೆ ಪಡೆದ ಭಾರತೀಯ ವಾಯುಸೇನೆ| ಅಭಿನಂದನ್ ಅವರ ವೈದ್ಯಕೀಯ ತಪಾಸಣೆಗೆ ಮುಂದಾದ ವಾಯುಸೇನೆ|

ಅಮೃತ್‌ಸರ್(ಮಾ.01): ಪಾಕ್ ವಶದಲ್ಲಿದ್ದ ಭಾರತೀಯ ವಾಯುಸೇನೆಯ ವಿಂಗ್ ಕಮಾಂಡರ್ ಅಭಿನಂದನ್ ಕೊನೆಗೂ ಸುರಕ್ಷಿತವಾಗಿ ಭಾರತಕ್ಕೆ ಮರಳಿದ್ದಾರೆ.

ರಾತ್ರಿ ಸುಮಾರು 9-20ರ ಸುಮಾರಿಗೆ ಅಭಿನಂದನ್ ಅವರನ್ನು ವಾಘಾ ಗಡಿಯ ಮೂಲಕ ಭಾರತಕ್ಕೆ ಹಸ್ತಾಂತರಿಸಲಾಯಿತು. ಇನ್ನು ಅಭಿನಂದನ್ ಬರುವಿಕೆಯನ್ನು ಕಾಯುತ್ತಿದ್ದ ಭಾರತೀಯ ವಾಯುಸೇನಾಧಿಕಾರಿಗಳು, ವಿಂಗ್ ಕಮಾಂಡರ್ ಅವರನ್ನು ತಮ್ಮ ಸುಪರ್ದಿಗೆ ಪಡೆದಿದೆ.

ಈ ಕುರಿತು ಮಾಹಿತಿ ನೀಡಿರುವ ಏರ್ ವೈಸ್ ಮಾರ್ಷಲ್ ಆರ್‌ಜಿಕೆ ಕಪೂರ್, ಅಭಿನಂದನ್ ಭಾರತಕ್ಕೆ ಮರಳಿದ್ದು, ನಮ್ಮ ವೀರ ಯೋಧನ ಮರಳುವಿಕೆ ಸಂತಸ ತಂದಿದೆ ಎಂದು ಹೇಳಿದ್ದಾರೆ. ಅಲ್ಲದೇ ಅಭಿನಂದನ್ ವಿಮಾನದಿಂದ ಹಾರಿದ್ದರಿಂದ ಅವರ ವೈದ್ಯಕೀಯ ತಪಾಸಣೆ ಅವಶ್ಯಕತೆ ಇದ್ದು, ಕೂಡಲೇ ಅವರನ್ನು ಸೇನಾ ಆಸ್ಪತ್ರೆಗೆ ರವಾನಿಸಲಾಗುವುದು ಎಂದು ತಿಳಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ರಾಜಕೀಯ ತೀಟೆಗೆ ಆರೋಪ, ಯಾವುದೇ ತನಿಖೆಗೆ ಸಿದ್ಧ: ಸಚಿವ ಕೃಷ್ಣ ಬೈರೇಗೌಡ
ಮುಂದಿನ 72 ಗಂಟೆಯಲ್ಲಿ ಭೂಮಿಯತ್ತ 10 ಕ್ಷುದ್ರ ಗ್ರಹ, ಡೇಂಜರ್ ಝೋನ್‌ನಲ್ಲಿದೆಯಾ ಜಗತ್ತು?