ಉರಿ ಸೇಡು..! ಪಾಕಿಸ್ತಾನದ ಉಗ್ರ ನೆಲೆಗಳ ಮೇಲೆ ಭಾರತೀಯ ಸೇನೆಯ ದಾಳಿ; 35 ಉಗ್ರರ ಹತ್ಯೆ

Published : Sep 29, 2016, 01:45 AM ISTUpdated : Apr 11, 2018, 01:12 PM IST
ಉರಿ ಸೇಡು..! ಪಾಕಿಸ್ತಾನದ ಉಗ್ರ ನೆಲೆಗಳ ಮೇಲೆ ಭಾರತೀಯ ಸೇನೆಯ ದಾಳಿ; 35 ಉಗ್ರರ ಹತ್ಯೆ

ಸಾರಾಂಶ

ನವದೆಹಲಿ(ಸೆ. 29): ಏನು ಮಾಡಿದರೂ ಭಾರತ ಸುಮ್ಮನಿರುತ್ತದೆ ಎಂದು ಭಾವಿಸಿದಂತಿದ್ದ ಪಾಕಿಸ್ತಾನಕ್ಕೆ ನಿನ್ನೆ ಸಖತ್ ಪೆಟ್ಟು ಸಿಕ್ಕಿದೆ. ಗಡಿ ನಿಯಂತ್ರಣ ರೇಖೆಯಲ್ಲಿರುವ ಭಯೋತ್ಪಾದನಾ ನೆಲೆಗಳ ಮೇಲೆ ಭಾರತೀಯ ಸೇನಾ ಯೋಧರು ಬುಧವಾರ ರಾತ್ರಿ ಕ್ಷಿಪ್ರ ಕಾರ್ಯಾಚರಣೆ ಮೂಲಕ ಧಾಳಿ ನಡೆಸಿ ಧ್ವಂಸ ಮಾಡಿದ್ದಾರೆ. ಈ ನೆಲೆಗಳ ಮೂಲಕ ಭಾರತದ ಮೇಲೆ ದಾಳಿ ನಡೆಸಲು ಉಗ್ರರು ಪ್ರಯತ್ನಿಸುತ್ತಿದ್ದಾರೆಂಬ ಗುಪ್ತಚರ ಮಾಹಿತಿಯನ್ನಾಧರಿಸಿ ಭಾರತೀಯ ಸೇನೆ ಕಾರ್ಯಾಚರಣೆ ನಡೆಸಿತ್ತು.

ಇಂದು ಈ ವಿಷಯವನ್ನು ಮಾಧ್ಯಮಗಳಿಗೆ ತಿಳಿಸಿದ ಭಾರತೀಯ ಸೇನಾಧಿಕಾರಿಗಳು, ಪಾಕ್ ಆಕ್ರಮಿತ ಕಾಶ್ಮೀರದಲ್ಲಿರುವ ಸಾಕಷ್ಟು ಭಯೋತ್ಪಾದಕರ ಶಿಬಿರಗಳನ್ನು ಧ್ವಂಸ ಮಾಡಿರುವುದಾಗಿ ತಿಳಿಸಿದ್ದಾರೆ. ಪಾಕಿಸ್ತಾನಕ್ಕೆ ಮಾಹಿತಿ ಕೊಟ್ಟೇ ಆ ದೇಶದ ಗಡಿಭಾಗಕ್ಕೆ ನುಗ್ಗಿ ಉಗ್ರರ ಕ್ಯಾಂಪ್'ಗಳ ಮೇಲೆ ದಾಳಿ ಮಾಡಲಾಗಿದೆ ಎಂದು ಭಾರತೀಯ ಸೇನೆ ಹೇಳಿದೆ. ಸೇನಾ ಮೂಲಗಳ ಪ್ರಕಾರ 30-35 ಉಗ್ರರು ಹತರಾಗಿದ್ದಾರೆ. ಆದರೆ, ಎಲ್'ಓಸಿಯಲ್ಲಿ ಭಾರತದ ಕಡೆಯಿಂದ ಯಾವುದೇ ದಾಳಿ ನಡೆದಿಲ್ಲವೆಂದು ಪಾಕಿಸ್ತಾನ ಹೇಳುತ್ತಿದೆ ಎಂದು ರಾಯ್ಟರ್ಸ್ ಸುದ್ದಿ ಸಂಸ್ಥೆ ವರದಿ ಮಾಡಿದೆ.

ಪಿಟಿಐ ಸುದ್ದಿ ಸಂಸ್ಥೆ ವರದಿ ಮಾಡಿದ ಮತ್ತೊಂದು ವರದಿ ಪ್ರಕಾರ, ಪಿಓಕೆಯ ಭಿಂಬರ್, ಹಾಟ್ ಸ್ಪ್ರಿಂಗ್, ಕೇಲ್ ಮತ್ತು ಲಿಪಾ ಸೆಕ್ಟರ್'ಗಳಲ್ಲಿನ ಗಡಿ ನಿಯಂತ್ರಣ ರೇಖೆಯಲ್ಲಿ ಅಪ್ರಚೋದಿತ ದಾಳಿ ನಡೆಸಿದ ಪಾಕಿಸ್ತಾನಕ್ಕೆ ಭಾರತೀಯ ಸೈನಿಕರು ತಿರುಗೇಟು ನೀಡಿದ್ದಾರೆ. ಆರು ಗಂಟೆ ಕಾಲ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಪಾಕ್ ಯೋಧರು ಹತರಾಗಿದ್ದಾರೆಂದು ಹೇಳಲಾಗುತ್ತಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ತಪ್ಪು ಮಾಡಿದ್ದರೆ ಗಲ್ಲಿಗೇರಿಸಿ, ಹಳೇ ದ್ವೇಷಕ್ಕೆ ತಂದೆ ಬಲಿಪಶು, ಕಣ್ಣೀರಿಟ್ಟ ಉನ್ನಾವೋ ಕೇಸ್ ಆರೋಪಿ ಪುತ್ರಿ
ಬೆಂಗಳೂರಿನ ಪಿಜಿ ಕಟ್ಟದಲ್ಲಿ ಸಿಲಿಂಡರ್ ಸ್ಫೋಟ, ಎಂಜಿನೀಯರ್ ಸಾವು, ಮೂವರಿಗೆ ಗಾಯ