ಪಾಕ್ ವಿರುದ್ಧ ಬಿಪಿನ್ ರಾವತ್ ಕಿಡಿ,  ಪಿಒಕೆಗೆ  ಪ್ಲ್ಯಾನ್ ರೆಡಿ

Published : Sep 23, 2019, 05:56 PM ISTUpdated : Sep 23, 2019, 06:00 PM IST
ಪಾಕ್ ವಿರುದ್ಧ ಬಿಪಿನ್ ರಾವತ್ ಕಿಡಿ,  ಪಿಒಕೆಗೆ  ಪ್ಲ್ಯಾನ್ ರೆಡಿ

ಸಾರಾಂಶ

ಪಾಕಿಸ್ತಾನಕ್ಕೆ ಪರೋಕ್ಷ ಎಚ್ಚರಿಕೆ ನೀಡಿದ ಸೇನಾ ಮುಖ್ಯಸ್ಥ ಬಿಪಿನ್ ರಾವತ್/ ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಸೇನಾ ಕಾರ್ಯಾಚರಣೆಗೆ ಸೇನೆ ಸನ್ನದ್ಧ/ ಉಗ್ರ ಚಟುವಟಿಕೆಗೆ ಬೆಂಬಲ ನೀಡುತ್ತಿರುವವರು ಯಾರು?

ನವದೆಹಲಿ(ಸೆ.23)  ಪದೇ ಪದೇ ಕಾಲು ಕೆರೆದುಕೊಂಡು ಒಂದಿಲ್ಲೊಂದು ಕಿತಾಪತಿ ಮಾಡುತ್ತಿರುವ ಪಾಕಿಸ್ತಾನಕ್ಕೆ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಸ್ಪಷ್ಟ ಎಚ್ಚರಿಕೆ ರವಾನಿಸಿದ್ದಾರೆ.  ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಯಾವುದೇ ರೀತಿಯ ಕ್ರಮ ಪ್ರಯೋಗಿಸಲು ಸೇನೆ ಸದಾ ಸಿದ್ಧವಿದೆ ಎಂದು ತಿಳಿಸಿದ್ದಾರೆ.

ಉಗ್ರಗಾಮಿ ಚಟುವಟಿಕೆಗೆ ಬೆಂಬಲ ನೀಡುತ್ತಿರುವುದನ್ನು ಹಲವು ಸಂದರ್ಭದಲ್ಲಿ ಪಾಕಿಸ್ತಾನವೇ ಒಪ್ಪಿಕೊಂಡಿದೆ. ಸ್ಥಳೀಯರಿಗೆ ಸಹಾಯ ಮಾಡುತ್ತೇನೆ ಎಂದು ಹೇಳಿಕೊಂಡೇ ಉಗ್ರ ಚಟುವಟಿಕೆ ನಡೆಸುತ್ತಿದೆ. ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಬಾಲ ಬಿಚ್ಚುವ ಕೆಲಸ ಮಾಡಿದರೆ ಸೇನೆ ಸುಮ್ಮನೆ ಕುಳಿತುಕೊಳ್ಳುವುದಿಲ್ಲ ಎಂದು ಹೇಳಿದ್ದಾರೆ.

ಜಮ್ಮು ಕಾಶ್ಮೀರಕ್ಕೆ ನೀಡಿದ್ದ 370ನೇ ವಿಧಿ ಹಿಂಪಡೆದ ವಿಚಾರ ಇಟ್ಟುಕೊಂಡುಭಾರತದ ವಿರುದ್ದ ಹೋರಾಟ ಮಾಡುತ್ತೇನೆ ಎಂಬ ಮಾತನಾಡುತ್ತಿದೆ. ಅಸಲಿಗೆ ತಾನೇ ಉಗ್ರ ಚಟುವಟಿಕೆಗೆ ಬೆಂಬಲ ನೀಡುತ್ತ ಭಾರತದ ವಿರುದ್ಧ ಮಾತನಾಡುತ್ತಿದೆ ಎಂದು ಗುಡುಗಿದ್ದಾರೆ.

ಬಾಲಾಕೋಟ್‌ನಲ್ಲಿ ಮತ್ತೆ ತಲೆ ಎತ್ತಿತು ಉಗ್ರಗಾಮಿಗಳ ಶಿಬಿರ!

ಸೇನೆಯ ಹದಿನೈದು ತುಕಡಿಗಳು ಯುದ್ಧ ತರಬೇತಿಯನ್ನು ಪಡೆದುಕೊಂಡಿದ್ದು ಸದಾ ಸರ್ವ ಸನ್ನದ್ಧವಾಗಿರುತ್ತದೆ. ಕೆಲವೊಂದು ತುಕಡಿಗಳು ಗಡಿಯಿಂದ ಆಚೆ ಹೋಗಿಯೂ ಕಾರ್ಯಾಚರಣೆ ನಡೆಸುವ ಶಕ್ತಿ ಹೊಂದಿವೆ ಎಂದು ತಿಳಿಸಿದ್ದಾರೆ.

'ಭಯೋತ್ಪಾದಕರ ಒಳನುಸುಳುವಿಕೆಗಾಗಿ ಪಾಕಿಸ್ತಾನ ಪದೇ ಪದೇ ಕದನ ವಿರಾಮವನ್ನು ಉಲ್ಲಂಘಿಸಿದೆ. ಕದನ ವಿರಾಮ ಉಲ್ಲಂಘನೆಯನ್ನು ಹೇಗೆ ಎದುರಿಸಬೇಕೆಂದು ನಮಗೆ ತಿಳಿದಿದೆ. ಎದುರಾಳಿಗೆ ಹೇಗೆ ಪ್ರತಿಕ್ರಿಯಿಸಬೇಕು ಎಂಬುದನ್ನು ನಮ್ಮ ಸೈನಿಕರು ಅರಿತಿದ್ದಾರೆ ಎಂದು ತಿಳಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಇನ್ಮುಂದೆ ನೂರು ಗ್ಯಾರಂಟಿ ಘೋಷಣೆ ಮಾಡಿದರೂ ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ: ಛಲವಾದಿ ನಾರಾಯಣಸ್ವಾಮಿ
ಕರ್ನಾಟಕ ರಾಜ್ಯ ಕ್ರಿಕೆಟ್‌ ಸಂಸ್ಥೆಗೆ ವೆಂಕಟೇಶ್ ಪ್ರಸಾದ್ ಅಧ್ಯಕ್ಷ, ಚುನಾವಣಾ ಫಲಿತಾಂಶ ಪ್ರಕಟ