
ನ್ಯೂಯಾರ್ಕ್(ನ.23): ಸ್ವತಂತ್ರ ಮಾಧ್ಯಮಕ್ಕೆ ಒತ್ತು ನೀಡುವ ಪತ್ರಕರ್ತರಿಗೆ ನೀಡಲಾಗುವ ‘ಅಂತಾರಾಷ್ಟ್ರೀಯ ಪತ್ರಿಕಾ ಸ್ವಾತಂತ್ರ್ಯ’ ಪ್ರಶಸ್ತಿಗೆ ಭಾರತದ ಪತ್ರಕರ್ತೆ ಮಾಲಿನಿ ಸುಬ್ರಮಣಿಯಂ ಅವರು ಭಾಜನರಾಗಿದ್ದಾರೆ.
ಛತ್ತೀಸ್'ಗಡದ ನಕ್ಸಲ್ ಪೀಡಿತ ಬಸ್ತರ್ ಜಿಲ್ಲೆಯ ವಿವಿಧ ಪ್ರದೇಶಗಳ ಕುರಿತಾಗಿನ ವರದಿಗಾಗಿ ಈ ಪ್ರಶಸ್ತಿ ಒಲಿದಿದೆ. ಮಾಲಿನಿ ಸುಬ್ರಮಣಿಯಂ ಜತೆ ವಿಶ್ವದ ಇತರ ಮೂವರು ಪತ್ರಕರ್ತರೂ ಈ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದಾರೆ.
ನಕ್ಸಲ್ ಪೀಡಿತ ಪ್ರದೇಶದಲ್ಲಿ ಭದ್ರತಾ ಪಡೆಗಳು ಮತ್ತು ಪೊಲೀಸರ ದೌರ್ಜನ್ಯ, ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ, ಅಪ್ರಾಪ್ತರ ಬಂಧನ, ಶಾಲೆಗಳ ಸ್ಥಗಿತ, ಕಾನೂನು ರಹಿತವಾಗಿ ಸಾರ್ವಜನಿಕರ ಹತ್ಯೆ ಮತ್ತು ಪತ್ರಕರ್ತರಿಗೆ ಬೆದರಿಕೆಯಂಥ ಘಟನೆಗಳ ಮಾಲಿನಿ ಸುಬ್ರಮಣಿಯಂ ವರದಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಅವರು ಅಂತಾರಾಷ್ಟ್ರೀಯ ಪ್ರಶಸ್ತಿಗೆ ಪಾತ್ರರಾಗಿದ್ದಾರೆ ಎಂದು ಪತ್ರಕರ್ತರ ರಕ್ಷಣಾ ಸಮಿತಿ ಹೇಳಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.