
ಮೆಲ್ಬರ್ನ್(ಅ.29): ಪಂಜಾಬ್ ಮೂಲದ ಬಸ್ ಚಾಲಕನ ಮೇಲೆ ವ್ಯಕ್ತಿಯೊಬ್ಬ ದಹನಶೀಲ ರಾಸಾಯನಿಕವನ್ನು ಹಾಕಿ ಹತ್ಯೆಗೈದ ಘಟನೆ ಆಸ್ಟ್ರೇಲಿಯಾದ ಬ್ರಿಸ್ಬೇನ್ನಲ್ಲಿ ನಡೆದಿದೆ. ಪ್ರಯಾಣಿಕರ ಮುಂದೆಯೇ ಈ ಕೃತ್ಯ ನಡೆದಿದ್ದು, ಐವರಿಗೆ ಸುಟ್ಟಗಾಯಗಳಾಗಿವೆ. ನಿಲ್ದಾಣವೊಂದರಲ್ಲಿ ಬಸ್ ನಿಂತಾಗ, ಬಸ್ ಚಾಲಕ ಮನ್ಮೀತ್ ಅಲಿಶರ್(29) ಮೇಲೆ ವ್ಯಕ್ತಿಯೊಬ್ಬ ಏಕಾಏಕಿ ಬೆಂಕಿ ಹೊತ್ತಿಸುವ ದ್ರವ ಎರಚಿದ್ದಾನೆ. ಪರಿಣಾಮ ಅಲಿಶರ್ ಬಸ್ಸಿನೊಳಗೇ ಸಜೀವ ದಹನವಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆ ಸಂಬಂಧ ೪೮ ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ. ಅಲಿಶರ್ ಒಳ್ಳೆಯ ಗಾಯಕನಾಗಿದ್ದು, ಬ್ರಿಸ್ಬೇನ್ನ ಪಂಜಾಬಿ ಸಮುದಾಯದಲ್ಲಿ ಖ್ಯಾತಿ ಗಳಿಸಿದ್ದ.----
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.