
ಪುಣೆ[ಡಿ.09]: ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಭ್ರಷ್ಟಾಚಾರ, ಭಯೋತ್ಪಾದನೆ, ವರದಕ್ಷಿಣೆ ಸೇರಿದಂತೆ ಇತರ ಸಾಮಾಜಿಕ ಪಿಡುಗುಗಳ ವಿರುದ್ಧ ಹೋರಾಟ ಹಮ್ಮಿಕೊಳ್ಳೋದು ಹೊಸ ವಿಷಯವೇನಲ್ಲ ಬಿಡಿ. ಆದ್ರೆ, ಮಹಾರಾಷ್ಟ್ರದ ಪುಣೆ ಜಿಲ್ಲೆಯಲ್ಲಿ ಗೂಬೆಗಳ ಹಬ್ಬ ಆಚರಿಸಲಾಗಿದೆ. ವಿಚಿತ್ರ ಅನ್ನಿಸಿದ್ರೂ, ಇದೇ ಸತ್ಯ.
ನವೆಂಬರ್ ಕೊನೆಯ ವಾರದಲ್ಲಿ ಪುಣೆಯಲ್ಲಿ ಮೂಢನಂಬಿಕೆ ವಿರೋಧಿ ಸಂಘಟನೆಯೊಂದು 2 ದಿನ ‘ಭಾರತೀಯ ಗೂಬೆ ಹಬ್ಬ’ ಹಮ್ಮಿಕೊಂಡಿತ್ತು. ಶಾಲಾ ವಿದ್ಯಾರ್ಥಿಗಳೇ ಮಾಡಿದ ಗೂಬೆಗಳ ಪೇಂಟಿಂಗ್, ಪೇಪರ್ ವರ್ಕ್, ಮರದ ಕೆತ್ತನೆಗಳನ್ನು ಪ್ರದರ್ಶಿಸಲಾಯಿತು. ಇದು ಮಕ್ಕಳಲ್ಲಿ ಮೂಢನಂಬಿಕೆ ವಿರೋಧಿ ಚಿಂತನೆ ಬೆಳೆಸಲು ನೆರವಾಗಿದೆ ಎಂದು ಆಯೋಜಕರು ತಿಳಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ