ಕೇರಳ ನೆರೆ ಸಂತ್ರಸ್ತರಿಗಾಗಿ ಉಚಿತ ಸೇವೆಗೆ ಮುಂದಾದ ಭಾರತೀಯ ರೈಲ್ವೆ!

Published : Aug 18, 2018, 05:41 PM ISTUpdated : Sep 09, 2018, 08:35 PM IST
ಕೇರಳ ನೆರೆ ಸಂತ್ರಸ್ತರಿಗಾಗಿ ಉಚಿತ ಸೇವೆಗೆ ಮುಂದಾದ ಭಾರತೀಯ ರೈಲ್ವೆ!

ಸಾರಾಂಶ

ಮಹಾಮಳೆಗೆ ತತ್ತರಿಸಿರುವ ಕೇರಳ! ನೆರೆ ಸಂತ್ರಸ್ತರ ನೆರವಿಗೆ ಭಾರತೀಯ ರೈಲ್ವೆ! ಉಚಿತವಾಗಿ ಪರಿಹಾರ ಸಾಮಗ್ರಿ ರವಾನಿಸಲು ನಿರ್ಧಾರ

ತಿರುವನಂತಪುರಂ(ಆ.18): ಮಹಾಮಳೆಗೆ ತತ್ತರಿಸಿರುವ ಕೇರಳಕ್ಕೆ ದೇಶದ ಮೂಲೆ ಮೂಲೆಗಳಿಂದ ನೆರವಿನ ಮಹಾಪೂರ ಹರಿದು ಬರುತ್ತಿದೆ. ಈಗಾಗಲೇ ಕೇರಳಕ್ಕೆ 500 ಕೋಟಿ ರೂ. ಬಿಡುಗಡೆ ಮಾಡಿರುವ ಕೇಂದ್ರ ಸರ್ಕಾರ ಸಾಧ್ಯವಾದ ಎಲ್ಲಾ ನೆರವನ್ನೂ ನೀಡಲು ಸಿದ್ಧ ಎಂದು ಘೋಷಿಸಿದೆ.

ಅದರಂತೆ ಭಾರತೀಯ ರೈಲ್ವೆ ಕೂಡ ಕೇರಳ ನೆರೆ ಸಂತ್ರಸ್ತರ ನೆರವಿಗೆ ಧಾವಿಸಿದ್ದು, ಪ್ರವಾಹ ಪೀಡಿತ ಪ್ರದೇಶಗಳಿಗೆ ಉಚಿತವಾಗಿ ಸಾಮಾನು ಸರಂಜಾಮು ರವಾನಿಸಲು ನಿರ್ಧರಿಸಿದೆ.

ಕೇರಳಕ್ಕೆ ದೇಶದ ಮೂಲೆ ಮೂಲೆಯಿಂದ ಪರಿಹಾರ ಸಾಮಗ್ರಿಗಳು ರವಾನೆಯಾಗುತ್ತಿದ್ದು, ಇವುಗಳನ್ನು ನೆರೆ ಸಂತ್ರಸ್ತರಿಗೆ ತಲುಪಿಸುವುದೇ ಕಷ್ಟದ ಕೆಲಸವಾಗಿದೆ. ಹೀಗಾಗಿ ಸಾಧ್ಯವಾದಷ್ಟೂ ಪರಿಹಾರ ಸಾಮಗ್ರಿಗಳನ್ನು ಉಚಿತವಾಗಿ ರವಾನಿಸಲು ರೈಲ್ವೆ ಇಲಾಖೆ ನಿರ್ಧರಿಸಿದೆ. 

ಭೂಕುಸಿತದಿಂದ ಅಲ್ಲಲ್ಲಿ ರೈಲು ಹಳಿಗಳು ಸಂಪೂರ್ಣವಾಗಿ ಮುಚ್ಚಿ ಹೋಗಿದ್ದು, ಇವುಗಳ ತೆರವು ಕಾರ್ಯಾಚರಣೆಯನ್ನೂ ಕೂಡ ರೈಲ್ವೆ ಇಲಾಖೆ ಚುರುಕುಗೊಳಿಸಿದೆ. ಇದರ ಜೊತೆಗೆ ಪರಿಹಾರ ಸಾಮಗ್ರಿಗಳನ್ನು ತುರ್ತಾಗಿ ರವಾನಿಸಲು ಸಜ್ಜಾಗಿದೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮನೆಗೆ ಮರಳುತ್ತಿದ್ದ ವೈದ್ಯೆ ಹಿಂಬಾಲಿಸಿ ಕಿರುಕುಳ, ಬೆಂಗಳೂರಲ್ಲಿ ತಡರಾತ್ರಿ ಬೆಚ್ಚಿ ಬೀಳಿಸಿದ ಘಟನೆ
ಔಷಧಿ ಖರೀದಿ ಟೆಂಡರ್‌ ತನಿಖೆಗೆ ತಜ್ಞರ ಸಮಿತಿ: ಸಚಿವ ಶರಣ ಪ್ರಕಾಶ್‌ ಪಾಟೀಲ್‌