Breaking: ದೇಶದ ಸಂಚಾರ ವ್ಯವಸ್ಥೆಯ ಜೀವನಾಡಿ ಬಂದ್

Published : Mar 22, 2020, 01:30 PM IST
Breaking: ದೇಶದ ಸಂಚಾರ ವ್ಯವಸ್ಥೆಯ ಜೀವನಾಡಿ ಬಂದ್

ಸಾರಾಂಶ

ಡೆಡ್ಲಿ ಕೊರೋನಾ ವೈರಸ್ ನಿಯಂತ್ರಣಕ್ಕೆ ಕೇಂದ್ರ ಸರ್ಕಾರ ಸಮಯಕ್ಕೆ ತಕ್ಕೆಂತೆ ನಿರ್ಧಾರ ಕೈಗೊಳ್ಳುವುದು ಅನಿವಾರ್ಯವಾಗಿದೆ. ಇದರಿಂದ ದೇಶದ ಸಂಚಾರ ವ್ಯವಸ್ಥೆಯ ಜೀವನಾಡಿ ಆಗಿರುವ ರೈಲ್ವೆ ಸಂಚಾರವನ್ನ ಸ್ಥಗಿತಗೊಳಿಸಿ ಕೇಂದ್ರ ರೈಲ್ವೆ ಇಲಾಖೆ ಆದೇಶ ಹೊರಡಿಸಿದೆ.

ನವದೆಹಲಿ, (ಮಾ.22): ಪೂರ್ವದಿಂದ ಪಶ್ಚಿಮಕ್ಕೆ, ಉತ್ತರದಿಂದ ದಕ್ಷಿಣಕ್ಕೆ ಪ್ರಯಾಣಿಕರನ್ನ ಕೊಂಡೊಯ್ಯುವ ದೇಶದ ಸಂಚಾರ ವ್ಯವಸ್ಥೆಯ ಜೀವನಾಡಿ ಸ್ಥಗಿತಗೊಳಿಸಲಾಗಿದೆ. ಕಾರಣ ಕೊರೋನಾ.

ಹೌದು..ದೇಶದಾದ್ಯಂತ ರೈಲು ಸಂಚಾರ ಸ್ಥಗಿತಗೊಳಿಸಿ ಬಾರತೀಯ ರೈಲ್ವೆ ಇಲಾಖೆ ಅಧಿಕೃತ ಆದೇಶ ಹೊರಡಿಸಿದೆ. ಇದು ಭಾರತದ ಇತಿಹಾಸದಲ್ಲಿಯೇ ರೈಸ್ವೆ ಸಂಚಾರ ಬಂದ್ ಮಾಡುತ್ತಿರುವುದು ಫಸ್ಟ್ ಟೈಮ್.

ಮಾರ್ಚ್, 31ರ ವರೆಗೆ ಎಲ್ಲಾ ಪ್ಯಾಸಿಂಜರ್ ರೈಲುಗಳನ್ನ ಸ್ಥಗಿತಗೊಳಿಸಲಾಗಿದ್ದು, ಕೇವಲ ಗೂಡ್ಸ್ ರೈಲುಗಳು ಮಾತ್ರ ಸಂಚರಿಸಲಿವೆ ಎಂದು ಎಂದು ರೈಲ್ವೆ ಇಲಾಖೆ ತಿಳಿಸಿದೆ.

ಶಂಕಿತ ಸೋಂಕಿತರು ರೈಲ್ವೆಯಲ್ಲಿ ಸಂಚರಿಸುವುದು ಕಂಡುಬಂದಿದ್ದರಿಂದ ಕೇಂದ್ರ ಇಲಾಖೆ ಈ ನಿರ್ಧಾರ ಕೈಗೊಂಡಿದೆ. ಇಂತಹ ಕಟ್ಟುನಿಟ್ಟಿನ ಕ್ರಮ ತೆಗೆದುಕೊಂಡಿರುವುದು ಒಳ್ಳೆಯ ನಿರ್ಧಾರ

ಮಾರಣಾಂತಿಕ ಕೊರೋನಾ ವೈರಸ್​​ಗೆ ವಿಶ್ವಾದ್ಯಂತ 13 ಸಾವಿರಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. ಮೂರು ಲಕ್ಷಕ್ಕೂ ಅಧಿಕ ಮಂದಿಗೆ ಈ ಸೋಂಕು ತಗುಲಿದೆ. ಇನ್ನು ಭಾರತದಲ್ಲಿ 324 ಜನರಿಗೆ ಈ ಕೊರೋನಾ ಸೋಂಕು ತಗುಲಿದ್ರೆ, 7 ಜನರು ಮೃತಪಟ್ಟಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮಹಿಳಾ ನೌಕರರಿಗೆ ಬ್ಯಾಡ್ ನ್ಯೂಸ್: ಮುಟ್ಟಿನ ರಜೆಗೆ ಹೈಕೋರ್ಟ್ ತಡೆ: ಸರ್ಕಾರದ ಆದೇಶಕ್ಕೆ ಹಿನ್ನಡೆ?
ನನ್ನ ತಂಗಿಯರಿಗಾಗಿ ಅವರನ್ನು ಬಿಟ್ಟುಬಿಡಿ: ತನ್ನ ಕೊಲ್ಲಲೆತ್ನಿಸಿದ ತಂದೆಯ ಬಿಡುಗಡೆಗೆ ಬೇಡಿದ ಬಾಲಕಿ