
ಲಕ್ನೋ : ವಿಮಾನದಲ್ಲಿ ಸೊಳ್ಳೆ ಇದೆ ಎಂದು ಹೇಳಿದ್ದಕ್ಕೆ ಬೆಂಗಳೂರು ಮೂಲದ ವೈದ್ಯರೋರ್ವರನ್ನು ಇಂಡಿಗೋ ವಿಮಾನದಿಂದ ಕೆಳಕ್ಕಿಳಿಸಿದ ಘಟನೆ ಲಕ್ನೋ ಏರ್’ಪೋರ್ಟ್’ನಲ್ಲಿ ನಡೆದಿದೆ.
ವಿಮಾನವನ್ನು ಏರಿದ್ದ ಡಾ.ಸೌರಭ್ ರೈ ಅವರು ಅತ್ಯಂತ ನಿಂದನಾತ್ಮಕ ಭಾಷೆಯನ್ನು ಬಳಸಿದ್ದರಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಇಂಡಿಗೋ ಸಿಬ್ಬಂದಿ ಕಾರಣವನ್ನು ನೀಡಿದ್ದಾರೆ.
ವಿಮಾನದ ಒಳಕ್ಕೆ ಬರುತ್ತಿದ್ದಂತೆ ಸೊಳ್ಳೆ ಇರುವುದಾಗಿ ಇದನ್ನು ಪ್ರಯಾಣಿಕರಿಗೆ ತಿಳಿಸಬೇಕಾಗಿ ಹೇಳಿದ್ದಾರೆ.
ಇದರಿಂದ ಇಂಡಿಗೋ ಸಿಬ್ಬಂದಿ ಅವರೊಂದಿಗೆ ವಾಗ್ವಾದಕ್ಕೆ ಇಳಿದಿದ್ದಾರೆ. ಈ ವೇಳೆ ಮಾತಿಗೆ ಮಾತು ಬೆಳೆದಿದ್ದು, ವಿಮಾನದಿಂದ ತಮ್ಮನ್ನು ಕೆಳಕ್ಕೆ ಇಳಿಸಿದ್ದಾರೆ ಎಂದು ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಸಿಬ್ಬಂದಿ ತಮ್ಮನ್ನು ನಡೆಸಿಕೊಂಡ ರೀತಿಯ ಬಗ್ಗೆ ಸೌರಭ್ ರೈ ತಿಳಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.