
ಬೆಂಗಳೂರು(ಜೂ.10): ಹೈಟೆಕ್ ಸಿಟಿ ಮಂದಿಗೆ ಕಡಿಮೆ ದರದಲ್ಲಿ ಉತ್ತಮ ಊಟ ಕೊಡಲು, ಇದೇ ಅಗಷ್ಟ್ 15 ರಂದು ಇಂದಿರಾ ಕ್ಯಾಂಟೀನ್ ಲೋಕಾರ್ಪಣೆಗೊಳ್ಳಲಿದೆ.
28 ವಿಧಾನಸಭಾ ಕ್ಷೇತ್ರದಲ್ಲಿ 200 ಕ್ಯಾಂಟೀನ್ ತೆರೆಯುವ ಯೋಜನೆಯನ್ನು ಸರ್ಕಾರ ಹಾಕಿಕೊಂಡಿದೆ. ಪೂರ್ವ ನಿರ್ಮಿತ ಕಾಂಕ್ರಿಟ್ ಗೋಡೆ, ನೆಲ ಹಾಗೂ ಛಾವಣಿಗಳನ್ನು ಬಳಸಿ ಕೆಲವೇ ದಿನಗಳಲ್ಲಿ ಕಟ್ಟಡ ನಿರ್ಮಿಸಲಿದೆ. 24 ಚದರ ಅಡಿ ವಿಸ್ತೀರ್ಣದಲ್ಲಿ ಅಡುಗೆಕೋಣೆ, 12 ರಿಂದ 14 ಚದರ ಅಡಿ ವಿಸ್ತೀರ್ಣದಲ್ಲಿ ಕ್ಯಾಂಟೀನ್ ಇರಲಿದೆ. ಕಟ್ಟಡ ನಿರ್ಮಾಣಕ್ಕೆ 28 ಲಕ್ಷ ರೂ. ವೆಚ್ಚವಾಗುವುದೆಂದು ಮೇಯರ್ ಜಿ.ಪದ್ಮಾವತಿ ತಿಳಿಸಿದ್ದಾರೆ.
ತಮಿಳುನಾಡು ಕೃಷ್ಣಗಿರಿಯ ಕೆಫೆ ಸಂಸ್ಥೆಗೆ ಇಂದಿರಾ ಕ್ಯಾಂಟೀನ್ ಗುತ್ತಿಗೆ ನೀಡುವುದು ಅಂತಿಮವಾಗಿದ್ದು, ಇಂದು ಮೇಯರ್ ಪರಿಶೀಲನೆಗಾಗಿ ಕೃಷ್ಣಗಿರಿಗೆ ತೆರಳುವ ಸಾಧ್ಯತೆಗಳಿವೆ. ಕೆ.ಆರ್.ಮಾರುಕಟ್ಟೆಯಲ್ಲೂ ತಲೆ ಎತ್ತಲಿರುವ ಇಂದಿರಾ ಕ್ಯಾಂಟೀನ್ ನಲ್ಲಿ, ಬೆಳಗಿನ ಉಪಹಾರ 5 ರೂ. ಹಾಗೂ ಮಧ್ಯಾಹ್ನದ ಊಟ 10 ರೂ.ಗೆ ನೀಡಲಾಗುತ್ತದೆ. ಎಲ್ಲಾ ಅಂದುಕೊಂಡಂತೆ ಆದರೆ, ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೀಯ ಯೋಜನೆ ಇನ್ನೆರಡು ತಿಂಗಳಲ್ಲಿ ಚಾಲನೆಗೆ ಬರಲಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.