ಮೀಸಲಾತಿ ನೀಡದೇ ಇಂದಿರಾ ಗಾಂಧಿ ಉತ್ತಮ ಆಡಳಿತ ಗಡ್ಕರಿ ಶ್ಲಾಘನೆ!

Published : Jan 08, 2019, 09:26 AM ISTUpdated : Jan 08, 2019, 12:06 PM IST
ಮೀಸಲಾತಿ ನೀಡದೇ ಇಂದಿರಾ ಗಾಂಧಿ ಉತ್ತಮ ಆಡಳಿತ ಗಡ್ಕರಿ ಶ್ಲಾಘನೆ!

ಸಾರಾಂಶ

ಇಂದಿರಾ ಗಾಂಧಿ ಹೊಗಳಿ ಗಡ್ಕರಿ ವಿವಾದ| ಮೀಸಲಾತಿ ಇಲ್ಲದೇ ಇಂದಿರಾ ಉತ್ತಮ ಸಾಧನೆ ಮಾಡಿದ್ದರು| ಧರ್ಮಾಧಾರಿತ ರಾಜಕಾರಣಕ್ಕೆ ನನ್ನ ವಿರೋಧವಿದೆ: ಕೇಂದ್ರ ಸಚಿವ

ನಾಗಪುರ[ಜ.08]: ಪಕ್ಷ ಸೋತಾಗ ಅದರ ನಾಯಕರಾದವರು ಸೋಲಿನ ಹೊಣೆ ಹೊರಬೇಕು ಎಂದು ಪಂಚರಾಜ್ಯಗಳ ಚುನಾವಣಾ ಫಲಿತಾಂಶ ಬಳಿಕ ಪರೋಕ್ಷವಾಗಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಅವರಿಗೆ ಟಾಂಗ್‌ ನೀಡಿದ್ದ ಕೇಂದ್ರ ಸಚಿವ, ಬಿಜೆಪಿ ಮುಖಂಡ ನಿತಿನ್‌ ಗಡ್ಕರಿ ಮತ್ತೊಂದು ವಿವಾದ ಮೈಮೇಲೆ ಎಳೆದುಕೊಂಡಿದ್ದಾರೆ. ತುರ್ತು ಪರಿಸ್ಥಿತಿ ಹೇರಿದ್ದ ಕಾರಣಕ್ಕೆ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರನ್ನು ಬಿಜೆಪಿ ನಾಯಕರು ವಿರೋಧಿಸುತ್ತಿದ್ದರೆ, ಗಡ್ಕರಿ ಇಂದಿರಾ ಅವರನ್ನೇ ಹಾಡಿ ಹೊಗಳಿದ್ದಾರೆ. ಅಲ್ಲದೆ ಧರ್ಮ ಆಧಾರಿತ ರಾಜಕಾರಣಕ್ಕೆ ನನ್ನ ವಿರೋಧವಿದೆ ಎಂದು ಘೋಷಿಸಿದ್ದಾರೆ.

ತಮ್ಮ ಸಾಮರ್ಥ್ಯ ಸಾಬೀತುಪಡಿಸಲು ಇಂದಿರಾ ಗಾಂಧಿ ಅವರು ಯಾವುದೇ ಮೀಸಲಾತಿ ಬಳಸಿರಲಿಲ್ಲ. ಕಾಂಗ್ರೆಸ್ಸಿನ ಪುರುಷ ನಾಯಕರಿಗಿಂತ ಅವರು ಉತ್ತಮ ಸಾಧನೆ ಮಾಡಿದ್ದರು ಎಂದು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

ಗೆದ್ದಾಗ ಬೀಗುವವರು, ಸೋಲಿನ ಹೊಣೆಯೂ ಹೊರಬೇಕು: ಗಡ್ಕರಿ ಪರೋಕ್ಷ ಟಾಂಗ್!

ನಾಗಪುರದಲ್ಲಿ ಭಾನುವಾರ ಸ್ವಸಹಾಯ ಸಂಘಗಳ ವಸ್ತು ಪ್ರದರ್ಶನ ಉದ್ಘಾಟಿಸಿ ಮಾತನಾಡಿದ ಅವರು, ಮಹಿಳಾ ಮೀಸಲಾತಿಗೆ ನನ್ನ ವಿರೋಧವಿಲ್ಲ. ಆದರೆ ಜಾತಿ ಹಾಗೂ ಧರ್ಮ ಆಧಾರಿತ ರಾಜಕಾರಣಕ್ಕೆ ನನ್ನ ವಿರೋಧವಿದೆ ಎಂದು ಹೇಳಿದರು.

ಬಿಜೆಪಿ ನಾಯಕರಾದ ಸುಷ್ಮಾ ಸ್ವರಾಜ್‌, ವಸುಂಧರಾ ರಾಜೇ ಹಾಗೂ ಲೋಕಸಭೆ ಸ್ಪೀಕರ್‌ ಸುಮಿತ್ರಾ ಮಹಾಜನ್‌ ಅವರು ಮೀಸಲಾತಿ ಲಾಭವಿಲ್ಲದೇ ಇದ್ದರೂ, ರಾಜಕಾರಣದಲ್ಲಿ ಉತ್ತಮ ಸಾಧನೆ ಮಾಡಿದ್ದಾರೆ. ಹಾಗಂತ ಮಹಿಳಾ ಮೀಸಲಿಗೆ ವಿರೋಧಿ ನಾನಲ್ಲ. ಮಹಿಳೆಯರಿಗೆ ಮೀಸಲಾತಿ ಬೇಕು. ಆದರೆ ಒಬ್ಬ ವ್ಯಕ್ತಿ ಜ್ಞಾನದ ಮೇಲೆ ಉತ್ತಮ ಸಾಧನೆ ಮಾಡುತ್ತಾನೆಯೇ ಹೊರತು ಭಾಷೆ, ಜಾತಿ, ಧರ್ಮ ಅಥವಾ ಪ್ರಾಂತ್ಯದ ಮೇಲಲ್ಲ ಎಂದು ಹೇಳಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಗೃಹಸಚಿವರು ಏನು ಬೇಕಾದ್ರೂ ಮಾಡಬಹುದು, ಅವರ ಕಣ್ಣುಗಳನ್ನು ನೋಡಿದರೆ ನನಗೆ ಭಯವಾಗುತ್ತೆ: ಮಮತಾ ಬ್ಯಾನರ್ಜಿ
ಅಣ್ಣಾ ಹಜಾರೆ ಮತ್ತೆ ಉಪವಾಸ ಸತ್ಯಾಗ್ರಹ ಘೋಷಣೆ: ಸ್ಥಳ, ದಿನಾಂಕ ನಿಗದಿ, ಕಾರಣವೇನು ಗೊತ್ತಾ?