
ವಿಜಯಪುರ(ಜ.10): ಮಂಗಳೂರಲ್ಲಿ ಕೊಲೆಯಾದ ಬಶೀರ್ ಹಾಗೂ ದೀಪಕ್ ರಾವ್ ಕುಟುಂಬಕ್ಕೆ10 ಲಕ್ಷ ಸರ್ಕಾರ ಪರಿಹಾರ ನೀಡಿದ ಸರ್ಕಾರ ವಿಜಯಪುರದಲ್ಲಿ ಅತ್ಯಾಚಾರಕ್ಕೀಡಾಗಿ ಕೊಲೆಯಾದ ಅಪ್ರಾಪ್ತೆ ಕುಟುಂಬಕ್ಕೆ ಕೇವಲ 4 ಲಕ್ಷ ನೀಡಿ ತಾರತಮ್ಯವೆಸಗಿದೆ ಎಂದು ನಟ ಹಾಗೂ ಪತ್ರಕರ್ತ ಇಂದ್ರಜಿತ್ ಲಂಕೇಶ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಅಪ್ರಾಪ್ತೆ ಮನೆಗೆ ಭೇಟಿ ಬಳಿಕ ಮಾತನಾಡಿದ ಅವರು, ಚಾರ್ಜಶೀಟ್ ಬಳಿಕ ಬಾಕಿ ಪರಿಹಾರ ನೀಡುತ್ತೇವೆ ಎಂದು ಹೇಳಿರುವುದು ದಲಿತರ ಮೇಲೆ ಮಾಡುತ್ತಿರುವ ದೌರ್ಜನ್ಯ. ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತರ ಅಪರಾಧ ಪ್ರಕರಣಗಳು ನಾಲ್ಕು ಪಟ್ಟು ಜಾಸ್ತಿಯಾಗಿದೆ. ಹಾಡುಹಗಲೇ ಮಹಿಳೆಯರ ಮೇಲೆ ಅತ್ಯಾಚಾರ, ದೌರ್ಜನ್ಯ ನಡೆಯುತ್ತಿವೆ. ದಲಿತ ಬಾಲಕಿ ಮೇಲೆ ನಡೆದ ದೌರ್ಜನ್ಯ ದುರಾದೃಷ್ಟಕರ ಬೆಳವಣಿಗೆ ಎಂದರು.
ನೊಂದ ಕುಟುಂಬದ ರಕ್ಷಣೆಗೆ ನಿಲ್ಲಬೇಕಿದ್ದ ಉಸ್ತುವಾರಿ ಮಂತ್ರಿ ಎಂ.ಬಿ. ಪಾಟೀಲ್ ಅವರು ಧರ್ಮ ಒಡೆಯುವ ಕೆಲಸ ಮಾಡುತ್ತಿದ್ದಾರೆ. ಧರ್ಮ-ಜಾತಿಗಳ ನಡುವೆ ಸಂಘರ್ಷ ತಂದಿಡುವ ಕೆಲಸ ಮಾಡುತ್ತಿದ್ದಾರೆ. ಇದನ್ನು ಬಿಟ್ಟು ಮೊದಲು ದಲಿತ ಬಾಲಕಿಯ ಮೇಲೆ ಆಗಿರುವ ದೌರ್ಜನ್ಯಕ್ಕೆ ನ್ಯಾಯ ಕೊಡಿಸಲು ಮುಂದಾಗಬೇಕೆಂದು ಆಕ್ರೋಶ ವ್ಯಕ್ತಪಡಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.