ಚಿದಂಬರಂ ವಿರುದ್ಧ ಸಾಕ್ಷ್ಯ ಹೇಳಲು ಇಂದ್ರಾಣಿ ನಿರ್ಧಾರ!

Published : Jul 05, 2019, 08:58 AM IST
ಚಿದಂಬರಂ ವಿರುದ್ಧ ಸಾಕ್ಷ್ಯ ಹೇಳಲು ಇಂದ್ರಾಣಿ ನಿರ್ಧಾರ!

ಸಾರಾಂಶ

ಐಎನ್‌ಎಕ್ಸ್ ಮೀಡಿಯಾ ಭ್ರಷ್ಟಾಚಾರ ಪ್ರಕರಣ| ಚಿದಂಬರಂ ವಿರುದ್ಧ ಸಾಕ್ಷ್ಯ ಹೇಳಲು ಇಂದ್ರಾಣಿ ನಿರ್ಧಾರ!

ನವದೆಹಲಿ[ಜು.05]: ಮಾಜಿ ಸಚಿವ ಪಿ.ಚಿದಂಬರಂ ಮತ್ತು ಅವರ ಪುತ್ರ ಕಾರ್ತಿ ಭಾಗಿಯಾಗಿದ್ದಾರೆಂದು ಆರೋಪಿಸಲಾದ ಐಎನ್‌ಎಕ್ಸ್ ಮೀಡಿಯಾ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿ ಮಾಫಿ ಸಾಕ್ಷಿಯಾಗಲು, ಪ್ರಕರಣದ ಪ್ರಮುಖ ಆರೋಪಿ ಇಂದ್ರಾಣಿ ಮುಖರ್ಜಿ ನಿರ್ಧರಿಸಿದ್ದಾರೆ. ಅವರ ಈ ನಿರ್ಧಾರವನ್ನು ದೆಹಲಿ ಹೈಕೋರ್ಟ್ ಕೂಡಾ ಮಾನ್ಯ ಮಾಡಿದೆ.

ಇದು ಮುಂದಿನ ದಿನಗಳಲ್ಲಿ ಚಿದಂಬರಂ ಮತ್ತು ಕಾರ್ತಿಗೆ ಸಂಕಷ್ಟ ತರುವ ಸಾಧ್ಯತೆ ಇದೆ. ಇಂದ್ರಾಣಿ ಅವರ ಈ ನಿರ್ಧಾರದಿಂದಾಗಿ, ಪ್ರಕರಣ ಶೀಘ್ರವೇ ತಾರ್ಕಿಕ ಅಂತ್ಯ ಕಾಣುವ ವಿಶ್ವಾಸವನ್ನು, ಪ್ರಕರಣದ ತನಿಖೆ ನಡೆಸುತ್ತಿರುವ ಸಿಬಿಐ ವ್ಯಕ್ತಪಡಿಸಿದೆ.

ಸದ್ಯ, ಇಂದ್ರಾಣಿ ಮುಖರ್ಜಿ ಪುತ್ರಿ ಶೀನಾ ಹತ್ಯೆ ಪ್ರಕರಣದ ಆರೋಪದ ಮೇಲೆ ಮುಂಬೈನ ಬೈಕುಲ್ಲಾ ಜೈಲಿನಲ್ಲಿದ್ದಾರೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಹಿಂದೂ, ಧರ್ಮವೇ ಅಲ್ಲ, ಅದೊಂದು ಬೈಗುಳ ಶಬ್ದ : ಬಿ.ಜಿ ಕೋಳ್ಸೆ
ಸಿದ್ದರಾಮಯ್ಯ ಬಳಿಕ ಸತೀಶ್‌ ಜಾರಕಿಹೊಳಿ ಸಿಎಂ ಆದರೆ ಖುಷಿ: ಬಿ.ಕೆ.ಹರಿಪ್ರಸಾದ್‌