ವೈದ್ಯರ ನಿರ್ಲಕ್ಷ್ಯಕ್ಕೆ ಕಂದಮ್ಮ ಬಲಿ

Published : Mar 12, 2018, 09:08 AM ISTUpdated : Apr 11, 2018, 01:00 PM IST
ವೈದ್ಯರ ನಿರ್ಲಕ್ಷ್ಯಕ್ಕೆ ಕಂದಮ್ಮ ಬಲಿ

ಸಾರಾಂಶ

ವೈದ್ಯರ ನಿರ್ಲಕ್ಷ್ಯದಿಂದಾಗಿ  ಹೊಟ್ಟೆಯಲ್ಲಿಯೇ ಕಂದಮ್ಮ  ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ಇಲ್ಲಿನ ಸರ್ಕಾರಿ ಹಳೆ ಹೆರಿಗೆ ಆಸ್ಪತ್ರೆಯಲ್ಲಿ ನಡೆದಿದೆ. 

ದಾವಣಗೆರೆ (ಮಾ. 11):  ವೈದ್ಯರ ನಿರ್ಲಕ್ಷ್ಯದಿಂದಾಗಿ  ಹೊಟ್ಟೆಯಲ್ಲಿಯೇ ಕಂದಮ್ಮ  ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ಇಲ್ಲಿನ ಸರ್ಕಾರಿ ಹಳೆ ಹೆರಿಗೆ ಆಸ್ಪತ್ರೆಯಲ್ಲಿ ನಡೆದಿದೆ.  

ತ್ಯಾವಣಗಿಯ ರೇಣುಕಾ ವೈದ್ಯರ ನಿರ್ಲಕ್ಷ್ಯಕ್ಕೊಳಗಾದ ಗರ್ಭಿಣಿ.  ಹೆರಿಗೆಗಾಗಿ ಶನಿವಾರ ಮಧ್ಯಾಹ್ನವೇ ರೇಣುಕಾ ಆಸ್ಪತ್ರೆಗೆ ದಾಖಲಾಗಿದ್ದರು.  ಒಂದೂವರೆ ದಿನ ಹೆರಿಗೆ ನೋವಿನಿಂದ ಒದ್ದಾಡುತ್ತಿದ್ದರೂ ಹೆರಿಗೆ ಮಾಡದ ವೈದ್ಯರು ನಿರ್ಲಕ್ಷ್ಯ ತೋರಿದ್ದಾರೆ.  ಬಳಿಕ ಭಾನುವಾರ ಸಂಜೆ  ಕೊನೆಗೂ ಸಿಜೇರಿಯನ್ ಮಾಡಿ ಶಿಶುವನ್ನು ಹೊರ ತೆಗೆದಿದ್ದಾರೆ. ಅಷ್ಟೊತ್ತಿಗಾಗಲೇ ಶಿಶು ಹೊಟ್ಟೆಯಲ್ಲೇ  ಮೃತಪಟ್ಟಿತ್ತು. 

ವೈದ್ಯರ ಬೇಜವಾಬ್ದಾರಿಗೆ ರೇಣುಕಾ ಸಂಬಂಧಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.  ಹೆರಿಗೆ ಮಾಡದ ವೈದ್ಯರ ವಿರುದ್ಧ ಆಸ್ಪತ್ರೆ ಅಧೀಕ್ಷಕರಿಗೆ ದೂರು ನೀಡಲಾಗಿದೆ.  ವೈದ್ಯರ ವಿರುದ್ಧ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ.   
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

14,19,06,98,900 ಲಾಟರಿ ಗೆದ್ದ ವಿಚಾರ ಯಾರಿಗೂ ಗೊತ್ತಾಗಬಾರದು ಅಂತ ಮುಖವಾಡ ಧರಿಸಿ ಲಾಟರಿ ಹಣ ಪಡೆದ ಯುವಕ
ಔಷಧ ಇಲ್ಲದೇ ರೋಗ ದೂರ ಮಾಡುವ ಆಯುರ್ವೇದ : ಕಜೆ