
ಹಾವೇರಿ(ಅ.18): ಹಾವೇರಿಯ ವೀರಾಪುರ ಖಾಸಗಿ ಆಸ್ಪತ್ರೆಯಲ್ಲಿ ಪೋಷಕರಿಂದಲೇ ಮಗು ಎಸ್ಕೇಪ್ ಮಾಡಿದ ಕುರಿತು ಸುವರ್ಣ ನ್ಯೂಸ್ ವಿಸ್ತೃತ ವರದಿ ಪ್ರಸಾರ ಮಾಡಿತ್ತು. ಈಗ ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಹಲವು ಸಂಶಯಗಳು ವ್ಯಕ್ತವಾಗಿದೆ.
ಮಗುವನ್ನು ಕದ್ದು ಮುಚ್ಚಿ ಎಸ್ಕೇಪ್ ಮಾಡುತ್ತಿರೋ ಎಕ್ಸ್ ಕ್ಲೂಸಿವ್ ದೃಶ್ಯಗಳು ಸುವರ್ಣ ನ್ಯೂಸ್'ಗೆ ಲಭ್ಯವಾಗಿದೆ. ಹೆರಿಗೆಯಾದ ಯುವತಿಯ ತಾಯಿ ಐಸಿಯುನಿಂದ ಮಗುವನ್ನು ಸೆರಗಿನಲ್ಲಿ ಮುಚ್ಚಿಕೊಂಡು ಹೊರಬರುತ್ತಾಳೆ. ಹಾಗೆ ಹೊರಬಂದ ಕೆಲವೇ ಸೆಕೆಂಡುಗಳಲ್ಲಿ ಅದೇ ಕೊಠಡಿಯಿಂದ ವೈದ್ಯನೊಬ್ಬ ನರ್ಸ್ ಜೊತೆ ಹೊರಬರ್ತಾರೆ, ಹೀಗಾಗಿ ಆ ವೈದ್ಯನ ಸಹಕಾರವೇನಾದ್ರೂ ಇದೆಯಾ ಎಂಬ ಸಂಶಯ ವ್ಯಕ್ತವಾಗಿದೆ.
ಇನ್ನು ಈ ವರದಿ ಕುರಿತು ಹಾವೇರಿ ಡಿಸಿ ಡಾ. ವೆಂಕಟೇಶ್ ಅವರ ಗಮನಕ್ಕೆ ಬಂದಿದ್ದು, ಪ್ರಕರಣ ನಿರ್ಲಕ್ಷವಹಿಸಿದ್ದ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುತ್ತೇನೆ ಅಂತಾ ಭರವಸೆ ನೀಡಿದ್ದಾರೆ. ಅಲ್ಲದೇ ಸುವರ್ಣ ನ್ಯೂಸ್ ಕಾರ್ಯಕ್ಕೆ ಶ್ಲಾಘನೆ ವ್ಯಕ್ತಪಡಿಸಿದ್ರು .
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.