
ಬೆಂಗಳೂರು(ಆ. 18): ಇನ್'ಫೋಸಿಸ್'ನ ವ್ಯವಸ್ಥಾಪಕ ನಿರ್ದೇಶಕ ಮತ್ತು ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಹುದ್ದೆಗೆ ವಿಶಾಲ್ ಸಿಕ್ಕಾ ರಾಜೀನಾಮೆ ನೀಡಿದ್ದಾರೆ. ಯು.ಬಿ.ಪ್ರವೀಣ್ ರಾವ್ ಅವರನ್ನು ಹಂಗಾಮಿ ಸಿಇಓ ಆಗಿ ನೇಮಕ ಮಾಡಲಾಗಿದೆ ಎಂದು ಕಂಪನಿ ಕಾರ್ಯದರ್ಶಿ ಎ.ಜಿ.ಎಸ್. ಮಣಿಕಂಠ ತಿಳಿಸಿದ್ದಾರೆ. ಅಗಸ್ಟ್ 18 ರಂದು ಸಿಕ್ಕಾ ಅವರ ರಾಜೀನಾಮೆಯನ್ನು ಕಂಪೆನಿಯ ಬೋರ್ಡ್ ಮೀಟಿಂಗ್ನಲ್ಲಿ ಅಂಗೀಕರಿಸಲಾಗಿದೆ. ಸಿಕ್ಕಾ ಇನ್ನುಮುಂದೆ ಕಂಪೆನಿಯ ಉಪಾಧ್ಯಕ್ಷರಾಗಿ ಮುಂದುವರಿಯುತ್ತಾರೆ ಎಂದು ಮಣಿಕಂಠ ತಿಳಿಸಿದ್ದಾರೆ.
ಇನ್ನು, ವಿಶಾಲ್ ರಾಜೀನಾಮೆ ಬೆನ್ನಲ್ಲೇ ಇನ್ಫೋಸಿಸ್ ಮುಖ್ಯಸ್ಥ ನಾರಾಯಣಮೂರ್ತಿ ವಾಗ್ದಾಳಿ ನಡೆಸಿದ್ದಾರೆ. ವಿಶಾಲ್ ಸಿಕ್ಕಾ ಅವರು ಸಿಇಒ ಆಗುವ ಅರ್ಹತೆ ಅಲ್ಲ ಅಂತ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.