
ರಾಮನಗರ[ಏ.25]: ಕುಡಿದ ಅಮಲಿನಲ್ಲಿ ಈಜಲು ಹೋಗಿದ್ದ ಹೆಲ್ತ್ ಇನ್ಸ್ಪೆಕ್ಟರ್ ಸಾವು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ರಾಮನಗರದಲ್ಲಿ ನಡೆದಿದೆ.
ಬಿಡದಿಯ ಅರೋಗ್ಯ ಇಲಾಖೆಯಲ್ಲಿ ಆರೋಗ್ಯ ನಿರೀಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದ ಶಂಕರ್(32) ಮೃತ ದುರ್ವೈವಿ. ಮಾಗಡಿಯ ಬೈಚಾಪುರ ಗ್ರಾಮದ ನಿವಾಸಿಯಾಗಿರುವ ಇವರು, ನಾಲ್ಕು ಜನ ಸ್ನೇಹಿತರೊಂದೊಂದಿಗೆ ಮದ್ಯ ಸೇವಿಸಿ ರಾಮನಗರದ ಸಿಂಗ್ರಬೋವಿದೊಡ್ಡಿಯಲ್ಲಿನ ಕೆರೆಯಲ್ಲಿ ಈಜಲು ತೆರೆಳಿದ್ದರು. ಈ ವೇಳೆ ಶಂಕರ್ ಕಾಲಿಗೆ ಗಿಡವೊಂದು ಸುತ್ತಿಕೊಂಡು ಈಜಲಾಗದೆ ಮುಳುಗಿದ್ದಾರೆ. ಹೀಗೆ ನೀರಿನಲ್ಲಿ ಮುಳುಗಿದ ಅವರು ಉಸಿರಾಡಲಾಗದೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಬುಧವಾರದಿಂದ ಮೃತ ಶರೀರಕ್ಕಾಗಿ ರಕ್ಷಣ ತಂಡ ಶೋಧ ಕಾರ್ಯ ನಡೆಸಿದ್ದು, ಗುರುವಾರ ಬೆಳಗ್ಗೆ ಶವ ಪತ್ತೆಯಾಗಿದೆ. ಪ್ರಕರಣ ಸಂಬಂಧ ಇನ್ಮುಳಿದ ಮೂವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ರಾಮನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.