ಭಿನ್ನಮತ ಮರೆತು ಒಗ್ಗಟ್ಟು ಪ್ರದರ್ಶನಕ್ಕೆ ಮುಂದಾದ ಬಿಜೆಪಿ

Published : Oct 11, 2017, 10:14 PM ISTUpdated : Apr 11, 2018, 01:09 PM IST
ಭಿನ್ನಮತ ಮರೆತು ಒಗ್ಗಟ್ಟು ಪ್ರದರ್ಶನಕ್ಕೆ ಮುಂದಾದ ಬಿಜೆಪಿ

ಸಾರಾಂಶ

ಪರಿವರ್ತನಾ ರ್ಯಾಲಿ ಆರಂಭಕ್ಕೂ ಮುನ್ನ ಬಿಜೆಪಿ ನಾಯಕರು ಒಗ್ಗಟ್ಟಾಗಿದ್ದಾರೆ.

ಬೆಂಗಳೂರು (ಅ.11): ಪರಿವರ್ತನಾ ರ್ಯಾಲಿ ಆರಂಭಕ್ಕೂ ಮುನ್ನ ಬಿಜೆಪಿ ನಾಯಕರು ಒಗ್ಗಟ್ಟಾಗಿದ್ದಾರೆ.

ಅಮಾನತುಗೊಂಡ ಬಿಜೆಪಿ ನಾಯಕರಿಗೆ ಪ್ರಮುಖ ಜವಾಬ್ದಾರಿ ನೀಡಲಾಗಿದೆ.  ಈ ಹಿಂದೆ ರಾಜ್ಯ ಮಟ್ಟದ ಕಾರ್ಯಕ್ರಮಗಳ ಅನುಷ್ಠಾನ ತಂಡದಿಂದ ಕೈಬಿಟ್ಟ ನಾಯಕರಿಗೆ ಮತ್ತೆ ಸ್ಥಾನ ನೀಡಲಾಗಿದೆ.  ಆಧುನಿಕ ಪ್ರಚಾರ ತಂಡದಲ್ಲಿ ನಿರ್ಮಲಕುಮಾರ ಸುರಾನಾ,  ಗಿರೀಶ್ ಪಟೇಲ್ ಗೆ ಸ್ಥಾನ ಕೊಡಲಾಗಿದೆ.

ಸಾಂಪ್ರದಾಯಿಕ ಪ್ರಚಾರ ತಂಡದಲ್ಲಿ ಮಾಜಿ ಸಚಿವ ಎಸ್.ಎ. ರವೀಂದ್ರನಾಥ್, ಸೊಗಡು ಶಿವಣ್ಣ ಹಾಗೂ ಎಂ.ಬಿ. ನಂದೀಶ್ ಗೆ ಸ್ಥಾನ ನೀಡಲಾಗಿದ್ದರೆ  ಬೂತ್ ಸಮಿತಿಗೆ ಮಾಜಿ ಸಹ ಕೋಶಾಧ್ಯಕ್ಷ ಕೇಶವಪ್ರಸಾದ್ ಗೆ ಸ್ಥಾನ ನೀಡಲಾಗಿದೆ.

ಭಿನ್ನಮತ ಮರೆತು ಒಗ್ಗಟ್ಟು ಪ್ರದರ್ಶನಕ್ಕೆ ಕಡೆಗೂ ಬಿಜೆಪಿ ಮುಂದಾಗಿದೆ. ಬೆಂಗಳೂರು ಸಮಾವೇಶ ಬಳಿಕ ರಾಜ್ಯಾದ್ಯಂತ ಸಂಚರಿಸಲಿರುವ ಯಾತ್ರೆಗೆ ಸಾಂಪ್ರದಾಯಿಕ ಪ್ರಚಾರ ತಂಡಕ್ಕೆ ಸಂಪೂರ್ಣ ಜವಾಬ್ದಾರಿ ನೀಡಲಾಗಿದೆ. ಸಾಂಪ್ರದಾಯಿಕ ಪ್ರಚಾರ ತಂಡದ ಸಂಚಾಲಕಿಯಾಗಿ ಸಂಸದೆ ಶೋಭಾ ಕರಂದ್ಲಾಜೆಗೆ ಜವಾಬ್ದಾರಿ ವಹಿಸಲಾಗಿದೆ.  ಶೋಭಾ ಕರಂದ್ಲಾಜೆ  ಯಾತ್ರೆಯ ಉಸ್ತುವಾರಿ ನೀಡಲಾಗಿದೆ. ಬಿಜೆಪಿ ರಾಜ್ಯಾಧ್ಯಕ್ಷ  ಯಡಿಯೂರಪ್ಪ ಈ ಆದೇಶ ನೀಡಿದ್ದಾರೆ.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಯಾವ ರಾಜ್ಯದಲ್ಲಿ ಗರಿಷ್ಠ ಬೆಲೆಗೆ ಮಾರಾಟವಾಗುತ್ತೆ ಪೆಟ್ರೋಲ್? ಕಡಿಮೆಗೆ ಎಲ್ಲಿ ಸಿಗುತ್ತೆ?
ದಾವಣಗೆರೆ: ಶಾಸಕ ಶಾಮನೂರು ಶಿವಶಂಕರಪ್ಪ ನಿಧನಕ್ಕೆ ಕಲಾಪ ಮುಂದಕ್ಕೆ ಇದೇ ಮೊದಲು