ತೀವ್ರ ವಿರೋಧದ ನಡುವೆಯೇ ಟಿಪ್ಪು ಜಯಂತಿ; ಮಡಿಕೇರಿಯಲ್ಲಿ ಬಿಗಿ ಬಂದೋಬಸ್ತ್

Published : Nov 09, 2017, 09:08 PM ISTUpdated : Apr 11, 2018, 12:36 PM IST
ತೀವ್ರ ವಿರೋಧದ ನಡುವೆಯೇ ಟಿಪ್ಪು ಜಯಂತಿ; ಮಡಿಕೇರಿಯಲ್ಲಿ ಬಿಗಿ ಬಂದೋಬಸ್ತ್

ಸಾರಾಂಶ

ತೀವ್ರ ವಿರೋಧದ ಮಧ್ಯೆಯೇ  ರಾಜ್ಯ ಸರಕಾರ ಟಿಪ್ಪು ಜಯಂತಿ ಆಚರಣೆಗೆ ಮುಂದಾಗಿದೆ. ಕೊಡಗು ಜಿಲ್ಲೆಯಲ್ಲಿ ಟಿಪ್ಪು ಜಯಂತಿಗೆ ತೀವ್ರ ವಿರೋಧ ವ್ಯಕ್ತವಾಗಿದ್ದು,  ಹಿಂದೂಪರ ಸಂಘಟನೆಗಳು ಮತ್ತು ಬಿಜೆಪಿ ಪ್ರತಿಭಟನೆ ನಡೆಸಲು ನಿರ್ಧರಿಸಿವೆ.

ಮಡಿಕೇರಿ (ನ.09): ತೀವ್ರ ವಿರೋಧದ ಮಧ್ಯೆಯೇ  ರಾಜ್ಯ ಸರಕಾರ ಟಿಪ್ಪು ಜಯಂತಿ ಆಚರಣೆಗೆ ಮುಂದಾಗಿದೆ. ಕೊಡಗು ಜಿಲ್ಲೆಯಲ್ಲಿ ಟಿಪ್ಪು ಜಯಂತಿಗೆ ತೀವ್ರ ವಿರೋಧ ವ್ಯಕ್ತವಾಗಿದ್ದು,  ಹಿಂದೂಪರ ಸಂಘಟನೆಗಳು ಮತ್ತು ಬಿಜೆಪಿ ಪ್ರತಿಭಟನೆ ನಡೆಸಲು ನಿರ್ಧರಿಸಿವೆ.

ಮುನ್ನೆಚ್ಚರಿಕೆ  ಕ್ರಮವಾಗಿ ಕೊಡಗು ಜಿಲ್ಲಾದ್ಯಂತ ಬಿಗಿ ಪೊಲೀಸ್​ ಬಂದೋಬಸ್ತ್​ ಕೈಗೊಳ್ಳಲಾಗುವುದು ಎಂದು ಕೊಡಗು ಡಿಸಿ ಮತ್ತು ಎಸ್​ಪಿ ಜಂಟಿ ಸುದ್ದಿಗೋಷ್ಠಿ ನಡೆಸಿ, ಟಿಪ್ಪು ಜಯಂತಿ ಆಚರಣೆಗೆ ಜಿಲ್ಲಾಡಳಿತ ಕ್ರಮ ಕೈಗೊಂಡಿದೆ. ಮಡಿಕೇರಿಯಲ್ಲಿ ನ. 10 ರಂದು 10 ಗಂಟೆಗೆ ಜಯಂತಿ ಆಚರಿಸಲಾಗುತ್ತದೆ. ಸೋಮವಾರಪೇಟೆ ಹಾಗೂ ವಿರಾಜಪೇಟೆ ತಾಲ್ಲೂಕಿನಲ್ಲಿ ಟಿಪ್ಪು ಜಯಂತಿ ಆಚರಣೆ ನಡೆಯಲಿದೆ ಎಂದು ತಿಳಿಸಿದ್ದಾರೆ.

ಶಾಂತಿ ಸಭೆ ನಡೆಸಿದ್ದು, ಶಾಲೆ ಕಾಲೇಜಿಗೆ ರಜೆ ಘೋಷಿಸಿಲ್ಲ. ಜಿಲ್ಲಾದ್ಯಂತ ನಿಷೇಧಾಜ್ಞೆ ಹೇರಲಾಗಿದೆ. ಕೊಡಗು ಜಿಲ್ಲೆಯ 3 ಅಂತರ್ ರಾಜ್ಯ ಹಾಗೂ 7 ಅಂತರ್ ಜಿಲ್ಲೆಯ ಚೆಕ್ ಪೋಸ್ಟ್'ಗಳಲ್ಲಿ ತಲಾ 4 ಸಿಸಿ ಕ್ಯಾಮೆರಾ,  ಕೊಡಗು ಜಿಲ್ಲೆಯ ಸೂಕ್ಷ್ಮ ಪ್ರದೇಶದಲ್ಲಿ 240 ಸಿಸಿ ಕ್ಯಾಮೆರಾ, 3 ಡ್ರೋನ್, ಪೊಲೀಸ್ ಹಾಗೂ ಖಾಸಗಿ ಸೇರಿ 30 ವೀಡಿಯೋ ಗ್ರಾಫರ್ ಬಳಸಿ ನಿಗಾವಹಿಸಲಾಗುತ್ತಿದೆ ಎಂದು ತಿಳಿಸಿದರು. ಇದರ ಮಧ್ಯೆ ನಿನ್ನೆ ಬಿಜೆಪಿ ಮತ್ತು ಹಿಂದೂಪರ ಸಂಘಟನೆಗಳಿಂದ ಕಪ್ಪುಪಟ್ಟಿ ಕಟ್ಟಿಕೊಂಡು ಪ್ರತಿಭಟನೆ ನಡೆಸಲಾಯಿತು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ರೈಲ್ ಇಂಡಿಯಾ ನೇಮಕಾತಿ: 154 ಹುದ್ದೆಗಳಿಗೆ ಅರ್ಜಿ ಆಹ್ವಾನ, ತಕ್ಷಣವೇ ಅರ್ಜಿ ಸಲ್ಲಿಸಿ
Viral Video: ವೇದಿಕೆಯಲ್ಲೇ ಮಹಿಳಾ ವೈದ್ಯೆಯ ಹಿಜಾಬ್‌ ತೆಗೆಯಲು ಯತ್ನಿಸಿದ ಬಿಹಾರ ಸಿಎಂ ನಿತೀಶ್‌ ಕುಮಾರ್‌