ಹಾವೇರಿಯಲ್ಲಿ ಅರ್ಧಕ್ಕೆ ಇಳಿಯಿತು ರಾಷ್ಟ್ರಧ್ವಜಕ್ಕೆ ಅಪಮಾನ: ಯುವಕನ ದುಷ್ಕೃತ್ಯ ಸಿಸಿಟಿವಿಯಲ್ಲಿ ಸೆರೆ

Published : Jul 19, 2017, 11:11 AM ISTUpdated : Apr 11, 2018, 12:38 PM IST
ಹಾವೇರಿಯಲ್ಲಿ ಅರ್ಧಕ್ಕೆ ಇಳಿಯಿತು ರಾಷ್ಟ್ರಧ್ವಜಕ್ಕೆ ಅಪಮಾನ: ಯುವಕನ ದುಷ್ಕೃತ್ಯ ಸಿಸಿಟಿವಿಯಲ್ಲಿ ಸೆರೆ

ಸಾರಾಂಶ

ಹಾವೇರಿ ಜಿಲ್ಲೆಯ ಹತ್ತಿಮತ್ತೂರಿನಲ್ಲಿ ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿರುವ ಘಟನೆ ನಡೆದಿದೆ. ಹತ್ತಿಮತ್ತೂರಿನ ಗ್ರಾ.ಪಂ. ಕಚೇರಿಯಲ್ಲಿದ್ದ ಧ್ವಜವನ್ನು ಯುವಕನ್ನೊಬ್ಬ ಮಟಮಟ ಮಧ್ಯಾಹ್ನವೇ ಅರ್ಧಕ್ಕೆ ಇಳಿಸಿ ಅಪಮಾನ ಮಾಡಿದ್ದಾನೆ.

ಹಾವೇರಿ(ಜು.19): ಹಾವೇರಿ ಜಿಲ್ಲೆಯ ಹತ್ತಿಮತ್ತೂರಿನಲ್ಲಿ ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿರುವ ಘಟನೆ ನಡೆದಿದೆ. ಹತ್ತಿಮತ್ತೂರಿನ ಗ್ರಾ.ಪಂ. ಕಚೇರಿಯಲ್ಲಿದ್ದ ಧ್ವಜವನ್ನು ಯುವಕನ್ನೊಬ್ಬ ಮಟಮಟ ಮಧ್ಯಾಹ್ನವೇ ಅರ್ಧಕ್ಕೆ ಇಳಿಸಿ ಅಪಮಾನ ಮಾಡಿದ್ದಾನೆ.

ಭಾನುವಾರ ರಜಾದಿನವಾಗಿದ್ದರಿಂದ ಗ್ರಾಮಪಂಚಾಯ್ತಿಯಲ್ಲಿ ಯಾರು ಇರಲಿಲ್ಲ. ಈ ಸಮಯವನ್ನು ನೋಡಿಕೊಂಡ ಯುವಕನೊಬ್ಬ ಗ್ರಾಮ ಪಂಚಾಯ್ತಿ ಆವರಣಕ್ಕೆ ಹೋಗಿ ಈವೊಂದು ದುಷ್ಕೃತ್ಯವೆಸಗಿದ್ದಾನೆ. ಇದೆಲ್ಲ ಗ್ರಾಮ ಪಂಚಾಯ್ತಿಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸುಮಾರು 2 ಗಂಟೆಗಳ ಕಾಲ ರಾಷ್ಟ್ರಧ್ವಜ ಅರ್ಧಕ್ಕೆ ಹಾರಾಡಿದೆ. ಬಳಿಕ ಇದನ್ನು ನೋಡಿದ ಕೆಲ ಸ್ಥಳೀಯ ಯುವಕ ಗ್ರಾಮಸ್ಥರಿಗೆ ಸುದ್ದಿ ತಿಳಿಸಿ, ಧ್ವಜವನ್ನು ಮತ್ತೆ ಮೇಲಕ್ಕೆ ಹಾರಿಸಲಾಯಿತು.

ಇನ್ನೂ ಈ ಘಟನೆ ನಡೆದು ಮೂರು ದಿನವಾದ್ರೂ ಇಲ್ಲಿನ ಪಿಡಿಓ ಮಾತ್ರ ಏನೂ ನಡೆದಿಲ್ಲ ಎನ್ನುವಂತೆ ವರ್ತಿಸುತ್ತಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿದೆ. ಹೀಗಾಗಿ ಗ್ರಾಮಸ್ಥರು ಗ್ರಾಮ ಪಂಚಾಯ್ತಿ ಪಿಡಿಓ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಬಿಗ್ ಬಾಸ್ ವಿಜೇತ ‘ಗಿಲ್ಲಿ’ ನಟನಿಗೆ ಹೆಚ್‌ಡಿ ಕುಮಾರಸ್ವಾಮಿ ಅಭಿನಂದನೆ; ಮಂಡ್ಯದ ಮಣ್ಣಿನ ಮಗನ ಸಾಧನೆಗೆ ಮೆಚ್ಚುಗೆ!
ಅಪಘಾತಕ್ಕೀಡಾಗಿ ರಸ್ತೆಯಲ್ಲಿ ಬಿದ್ದಿದ್ದ ಗಾಯಾಳು; ಕಾರು ನಿಲ್ಲಿಸಿ ಆಸ್ಪತ್ರೆಗೆ ಸೇರಿಸಿದ ಸಚಿವ ಪ್ರಿಯಾಂಕ್ ಖರ್ಗೆ!