
ಬೆಂಗಳೂರು(ನ.15): ಮನೆಯ ಮುಂದೆ ನಿಲ್ಲಿಸಿದ್ದ ದ್ವಿಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಅಂತಾರಾಜ್ಯ ಕಳ್ಳನನ್ನು ಆಡುಗೋಡಿ ಪೊಲೀಸರು ಬಂಧಿಸಿದ್ದಾರೆ.
ತಮಿಳುನಾಡಿನ ಸೇಲಂ ಜಿಲ್ಲೆಯ ಅರ್ಜುನನ್(27) ಬಂಧಿತ ಆರೋಪಿ. ಆರೋಪಿಯಿಂದ ₹ 15 ಲಕ್ಷ ಮೌಲ್ಯದ 14 ದ್ವಿಚಕ್ರ ವಾಹನಗಳನ್ನು ಜಪ್ತಿ ಮಾಡಲಾಗಿದೆ. ಮೂಲತಃ ತಮಿಳುನಾಡಿನ ಅರ್ಜುನ್ ಬಸ್ ಮೂಲಕ ಬೆಂಗಳೂರಿಗೆ ಬರುತ್ತಿದ್ದ. ನಗರದಲ್ಲಿ ಮಧ್ಯರಾತ್ರಿ ಸಂಚರಿಸಿ ಮನೆ ಮುಂದೆ ನಿಲ್ಲಿಸಿದ್ದ ಬೈಕ್'ಗಳ ಹ್ಯಾಂಡಲ್ ಮುರಿದು ಕಳವು ಮಾಡುತ್ತಿದ್ದ. ಕದ್ದ ಬೈಕ್'ಗಳನ್ನು ತಮಿಳುನಾಡಿನಲ್ಲಿ ಮಾರಾಟ ಮಾಡುತ್ತಿದ್ದ ಎಂದು ಪೊಲೀಸರು ಹೇಳಿದರು. ಆಡುಗೋಡಿ, ವಿವೇಕ ನಗರ, ಪರಪ್ಪನ ಅಗ್ರಹಾರ ಕಳವು ಮಾಡುತ್ತಿದ್ದ. ಈತನ ಬಂಧನದಿಂದ 14 ಪ್ರಕರಣಗಳು ಬೆಳಕಿಗೆ ಬಂದಿವೆ.
ಆರೋಪಿ ದುಬಾರಿ ಬೆಲೆಯ ಮೂರು ಎನ್'ಫೀಲ್ಡ್ ಬೈಕ್'ಗಳನ್ನು ಕೂಡ ಕಳುವು ಮಾಡಿದ್ದ. ಕುಖ್ಯಾತ ಕಳ್ಳನಾಗಿರುವ ಅರ್ಜುನನ್ ವಿರುದ್ಧ ತಮಿಳುನಾಡಿನಲ್ಲಿ ಕಳವು, ಡಕಾಯತಿ, ಮನೆಗಳವು ಪ್ರಕರಣಗಳಿವೆ. ಮತ್ತೆ-ಮತ್ತೆ ಕಳವು ಕೃತ್ಯ ಮುಂದುವರಿಸುತ್ತಿದ್ದರಿಂದ ಗೂಂಡಾ ಕಾಯ್ದೆಯಡಿ ಬಂಧಿಸಿ ಜೈಲಿಗೆ ಕಳುಹಿಸಲಾಗಿತ್ತು. ಇತ್ತೀಚೆಗಷ್ಟೇ ಬಿಡುಗಡೆಗೊಂಡಿದ್ದ ಆರೋಪಿ ನಗರಕ್ಕೆ ಬಂದು ಕಳವು ಕೃತ್ಯ ಎಸಗುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.