
ನವದೆಹಲಿ(ಮೇ.10): ಭಾರತೀಯ ಗೂಢಾಚಾರಿ ಎಂಬ ಆರೋಪದ ಮೇರೆಗೆ ಭಾರತೀಯ ಕುಲಭೂಷಣ್ ಜಾಧವ್ ಅವರ ಮೇಲೆ ಪಾಕಿಸ್ತಾನ ನ್ಯಾಯಾಲಯ ವಿಧಿಸಿರುವ ಗಲ್ಲು ಶಿಕ್ಷೆಗೆ ಹಾಲೆಂಡ್'ನ ಹೇಗ್ 'ಕುಲಭೂಷಣ್ ಜಾಧವ್ ವಿರುದ್ಧ ಪಾಕಿಸ್ತಾನ ಮಿಲಿಟರಿ ನ್ಯಾಯಾಲಯ ನೀಡಿರುವ ಮರಣ ದಂಡನೆ ತೀರ್ಪಿನ ವಿರುದ್ಧ ಭಾರತ ಸರ್ಕಾರ ಸಲ್ಲಿಸಿದ್ದ ಮನವಿಯ ವಿಚಾರಣೆಯನ್ನು ಕೈಗೆತ್ತಿಕೊಂಡಿರುವ ಅಂತಾರಾಷ್ಟ್ರೀಯ ನ್ಯಾಯಾಲಯ ಸದ್ಯದ ಮಟ್ಟಿಗೆ ಮರಣ ದಂಡನೆ ಶಿಕ್ಷೆಗೆ ತಡೆಯಾಜ್ಞೆ ನೀಡಿದೆ. ಈ ಕುರಿತಂತೆ, ಪಾಕಿಸ್ತಾನ ಪ್ರಧಾನ ಮಂತ್ರಿ ನವಾಜ್ ಷರೀಫ್ ಅವರಿಗೂ ನ್ಯಾಯಾಲಯ ಪತ್ರ ರವಾನಿಸಿದೆ.
ಭಾರತೀಯ ನೌಕಾಪಡೆಯ ಮಾಜಿ ಅಧಿಕಾರಿಯೂ ಆಗಿರುವ ಕುಲಭೂಷಣ್ ಜಾಧವ್ ಅವರನ್ನು ಕಳೆದ ವರ್ಷ ಮಾರ್ಚ್ ನಲ್ಲಿ ಪಾಕಿಸ್ತಾನ ದ ಕರಾಚಿಯಲ್ಲಿ ಅಲ್ಲಿನ ಭದ್ರತಾ ಪಡೆಗಳು ಬಂಧಿಸಿದ್ದವು. ಆಗಿನಿಂದ ಪಾಕಿಸ್ತಾನ ಮಿಲಿಟರಿ ನ್ಯಾಯಾಲಯದಲ್ಲಿ ಜಾಧವ್ ವಿರುದ್ಧ ಪ್ರಕರಣದ ವಿಚಾರಣೆ ನಡೆಯುತ್ತಿತ್ತು. ಕಳೆದ ತಿಂಗಳ 10ರಂದು ನ್ಯಾಯಾಲಯ ಜಾಧವ್ ಅವರಿಗೆ ಕರಾಚಿ ಹಾಗೂ ಬಲೂಚಿಸ್ತಾನದ ಪ್ರಾಂತ್ಯದಲ್ಲಿ ಗೂಢಚರ್ಯೆ ನಡೆಸಿದ ಆರೋಪದ ಮೇರೆಗೆ ಗಲ್ಲು ಶಿಕ್ಷೆ ವಿಧಿಸಿತ್ತು. ಗಲ್ಲು ಶಿಕ್ಷೆಗೆ ತಡೆಯಾಜ್ಞೆ ನೀಡಿರುವ ಕುರಿತು ಕುಲಭೂಷಣ್ ಕುಟಂಬದವರ ಜೊತೆ ಮಾತನಾಡಿರುವುದಾಗಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಟ್ವೀಟ್ ಮಾಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.