ಇನ್ನುಮುಂದೆ ಬೆಂಗಳೂರಿನ ಹಲವೆಡೆ ಹೈ ಸ್ಪೀಡ್ ಇಂಟರ್ನೆಟ್ ಸೌಲಭ್ಯ

Published : Jan 25, 2018, 10:50 AM ISTUpdated : Apr 11, 2018, 01:11 PM IST
ಇನ್ನುಮುಂದೆ ಬೆಂಗಳೂರಿನ ಹಲವೆಡೆ ಹೈ ಸ್ಪೀಡ್ ಇಂಟರ್ನೆಟ್ ಸೌಲಭ್ಯ

ಸಾರಾಂಶ

ಬೆಂಗಳೂರು ನಗರದ 300 ಸ್ಥಳಗಳಲ್ಲಿ ಉಚಿತ ಹೈ ಸ್ಪೀಡ್ ಇಂಟರ್ ನೆಟ್ ಸೌಲಭ್ಯ ಒದಗಿಸುವ ಸಲುವಾಗಿ ರಾಜ್ಯದ ಮಾಹಿತಿ ತಂತ್ರಜ್ಞಾನ ಇಲಾಖೆ ವೈ-ಫೈ ಹಬ್ ಟವರ್‌ಗಳ ಸ್ಥಾಪನೆ ಕಾರ್ಯಕ್ಕೆ ಚಾಲನೆ ನೀಡಿದೆ.

ಬೆಂಗಳೂರು (ಜ.25): ಬೆಂಗಳೂರು ನಗರದ 300 ಸ್ಥಳಗಳಲ್ಲಿ ಉಚಿತ ಹೈ ಸ್ಪೀಡ್ ಇಂಟರ್ ನೆಟ್ ಸೌಲಭ್ಯ ಒದಗಿಸುವ ಸಲುವಾಗಿ ರಾಜ್ಯದ ಮಾಹಿತಿ ತಂತ್ರಜ್ಞಾನ ಇಲಾಖೆ ವೈ-ಫೈ ಹಬ್ ಟವರ್‌ಗಳ ಸ್ಥಾಪನೆ ಕಾರ್ಯಕ್ಕೆ ಚಾಲನೆ ನೀಡಿದೆ.

ಈಗಾಗಲೇ ವಿಧಾನಸೌಧ ಮುಂಭಾಗ ಹಾಗೂ ರೇಡಿಯೋ ಸ್ಟೇಷನ್ ಬಳಿ ವೈ-ಫೈ ಟವರ್‌ಗಳನ್ನು ಸ್ಥಾಪಿಸಲಾಗಿದ್ದು, ಉಳಿದೆಡೆಯೂ ನಿರ್ಮಾಣ ಕಾರ್ಯಕ್ಕೆ ಈಗಾಗಲೇ ಚಾಲನೆ ನೀಡಿದೆ. ಈ ಯೋಜನೆ ಅನುಷ್ಠಾನಕ್ಕೆ ರಾಜ್ಯ ಸರ್ಕಾರವು ಬಿಎಸ್ಎನ್‌ಎಲ್ ಮತ್ತು ಖಾಸಗಿ ಕಂಪನಿಯ ಜತೆ ಒಪ್ಪಂದ ಮಾಡಿಕೊಂಡಿದೆ.

ಬೆಂಗಳೂರು ಮಾತ್ರವಲ್ಲದೇ ರಾಜ್ಯದ 11 ಮಹಾನಗರ ಪಾಲಿಕೆಗಳು ಹಾಗೂ 2600 ಗ್ರಾಮ ಪಂಚಾಯತಿಗಳ ವ್ಯಾಪ್ತಿಯಲ್ಲೂ ವೈ-ಫೈ ಹಬ್ ಸ್ಥಾಪಿಸಲಾಗುತ್ತಿದೆ. ಈಗಾಗಲೇ ಬೆಂಗಳೂರು, ಮಂಗಳೂರು ಮತ್ತು ಹುಬ್ಬಳ್ಳಿ-ಧಾರವಾಡ ಸೇರಿದಂತೆ ಮೂರು ಮಹಾನಗರ ಪಾಲಿಕೆಗಳ ವ್ಯಾಪ್ತಿ ಯಲ್ಲಿ ಯೋಜನೆಗೆ ಸಿದ್ಧತೆಗಳು ಪೂರ್ಣಗೊಂಡಿವೆ.

ರಾಜ್ಯದ ಗ್ರಾಮೀಣ ಭಾಗದಲ್ಲಿ ಜನವರಿ ಅಂತ್ಯಕ್ಕೆ ಉಚಿತ ಇಂಟರ್‌ನೆಟ್ ಸೇವೆ ಆರಂಭವಾಗಲಿದ್ದು, ಈಗಾಗಲೇ 11 ಗ್ರಾ.ಪಂ. ವ್ಯಾಪ್ತಿಯಲ್ಲಿ ಉಚಿತ ವಾಗಿ 1 ಜಿಬಿ ಸಾಮರ್ಥ್ಯದ ಇಂಟರ್‌ನೆಟ್ ಪೂರೈಕೆಗೆ ಸಿದ್ಧತೆಗಳು ಪೂರ್ಣಗೊಂಡಿವೆ. ಉಳಿದ 2600 ಗ್ರಾ.ಪಂ.ಗಳ ವ್ಯಾಪ್ತಿಯಲ್ಲೂ ಶೀಘ್ರ ಯೋಜನೆ ಅನುಷ್ಠಾನಗೊಳ್ಳಲಿದೆ.

ಈಗಾಗಲೇ ರಾಜ್ಯದ ಎಲ್ಲಾ ಗ್ರಾಮ ಪಂಚಾಯತಿಗಳಿಗೆ ಬಿಎಸ್‌ಎನ್‌ಎಲ್ ರೂಟರ್ ಅಳವಡಿಕೆ ಕಾರ್ಯಕ್ಕೆ ಚಾಲನೆ ನೀಡಿದ್ದು, ನಗರ ಪ್ರದೇಶಗಳಲ್ಲಿ ಖಾಸಗಿ ಆಪರೇಟರ್‌ಗಳೊಂದಿಗೆ ಒಪ್ಪಂದ ಮಾಡಿಕೊಂಡು ಉಚಿತ ಇಂಟರ್‌ನೆಟ್ ಸೌಲಭ್ಯ ಒದಗಿಸಲಾಗುತ್ತಿದೆ. ಮುಂದಿನ ಆರು ತಿಂಗಳಲ್ಲಿ ರಾಜ್ಯದ ನಗರ ಹಾಗೂ ಗ್ರಾಮೀಣ ಪ್ರದೇಶದ ಬಹುತೇಕ ಪ್ರದೇಶ ಉಚಿತ ಇಂಟರ್ ನೆಟ್ ಸೌಲಭ್ಯ ವ್ಯಾಪ್ತಿಗೆ ಒಳಪಡಿಸುವ ಗುರಿಯನ್ನು ಇಲಾಖೆ ಹೊಂದಿದೆ ಎನ್ನುತ್ತಾರೆ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

'ರಸ್ತೆ-ಚರಂಡಿ ನಿರ್ಮಾಣದಿಂದ ಬಡವರು ಉದ್ದಾರ ಆಗ್ತಾರಾ?' ಗ್ಯಾರಂಟಿ ಸ್ಕೀಂ ಟೀಕೆಗೆ ಗೃಹಸಚಿವ ಪರಂ ತಿರುಗೇಟು!
ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ನಿಧನ, ದಾವಣಗೆರೆ ವ್ಯಾಪ್ತಿಯ ಶಾಲೆಗಳಿಗೆ ನಾಳೆ ರಜೆ