ನ್ಯಾಯಾಲಯಕ್ಕೆ ಅಲೋಕ್‌ ಕುಮಾರ್ ಮೊರೆ?

Published : Aug 03, 2019, 09:05 AM ISTUpdated : Aug 03, 2019, 12:03 PM IST
ನ್ಯಾಯಾಲಯಕ್ಕೆ ಅಲೋಕ್‌ ಕುಮಾರ್ ಮೊರೆ?

ಸಾರಾಂಶ

45 ದಿನಕ್ಕೆ ಬೆಂಗಳೂರು ಪೊಲೀಸ್ ಆಯುಕ್ತ ಅಲೋಕ್ ಕುಮಾರ್ ವರ್ಗಾವಣೆಯಾಗಿದ್ದು, ಈ ನಿಟ್ಟಿನಲ್ಲಿ ನ್ಯಾಯಾಲಯದ ಮೊರೆ ಹೋಗಿದ್ದಾರೆ ಎನ್ನಲಾಗಿದೆ. 

ಬೆಂಗಳೂರು [ಆ.03]:  ರಾಜ್ಯದಲ್ಲಿ ನೂತನ ಸರ್ಕಾರ ರಚನೆ ಬೆನ್ನಲ್ಲೇ ಪೊಲೀಸ್‌ ಇಲಾಖೆಯಲ್ಲಿ ‘ವರ್ಗಾವಣೆ ಪರ್ವ’ ಮುಂದುವರೆದಿದ್ದು, ಶುಕ್ರವಾರ ಮಹತ್ವದ ಬೆಳವಣಿಗೆಯಲ್ಲಿ ಬೆಂಗಳೂರು ನಗರ ಪೊಲೀಸ್‌ ಆಯುಕ್ತ ಅಲೋಕ್‌ ಕುಮಾರ್‌ ಸೇರಿದಂತೆ ಒಂಭತ್ತು ಐಪಿಎಸ್‌ ಅಧಿಕಾರಿಗಳನ್ನು ಸರ್ಕಾರ ವರ್ಗಾವಣೆಗೊಳಿಸಿದೆ.

ತಮ್ಮನ್ನು ಅಲ್ಪಾವಧಿಯಲ್ಲೇ ಆಯುಕ್ತ ಹುದ್ದೆಯಿಂದ ವರ್ಗಾವಣೆ ಮಾಡಿದ ಆದೇಶವನ್ನು ಪ್ರಶ್ನಿಸಿ ಐಪಿಎಸ್‌ ಅಧಿಕಾರಿ ಅಲೋಕ್‌ ಕುಮಾರ್‌ ಅವರು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಲಿದ್ದಾರೆ ಎಂದು ತಿಳಿದು ಬಂದಿದೆ.

ಈ ಕಾರಣಕ್ಕಾಗಿಯೇ ಅವರು ನೂತನ ಆಯುಕ್ತರಿಗೆ ಅಧಿಕಾರ ಹಸ್ತಾಂತರಿಸುವ ವೇಳೆ ಗೈರಾಗಿದ್ದರು ಎಂಬ ಮಾತುಗಳು ಕೇಳಿಬಂದಿವೆ. ಐಜಿಪಿ ಹುದ್ದೆಯಲ್ಲಿದ್ದ ಅಲೋಕ್‌ ಕುಮಾರ್‌ ಅವರಿಗೆ ಎಡಿಜಿಪಿ ಹುದ್ದೆಗೆ ಮುಂಬಡ್ತಿ ನೀಡಿ ಆಯುಕ್ತರನ್ನಾಗಿ ಜೂ.17ರಂದು ಸರ್ಕಾರ ನೇಮಿಸಿತ್ತು. ಅಂದು ಸೇವಾ ಹಿರಿತನ ಪರಿಗಣಿಸದೆ ಕಿರಿಯ ಅಧಿಕಾರಿಗೆ ಸರ್ಕಾರ ಮಣೆ ಹಾಕಿದೆ ಎಂದು ಕೆಲ ಹಿರಿಯ ಎಡಿಜಿಪಿಗಳು ಅಸಮಾಧಾನ ಹೊರಹಾಕಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಪವರ್‌ ಪಾಯಿಂಟ್‌: ದ್ವೇಷ ಭಾಷಣ ಮಸೂದೆಯಿಂದ ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಧಕ್ಕೆ
'ಲಕ್ಷ್ಮಿ ಹೆಬ್ಬಾಳ್ಕರ್ ಅವರೇ, ಫೆಬ್ರವರಿ-ಮಾರ್ಚ್ ಹಣ ಯಾವಾಗ ಬರುತ್ತೆ? ಸದನಕ್ಕೆ ತಪ್ಪು ಮಾಹಿತಿ ವಿರುದ್ಧ ರೊಚ್ಚಿಗೆದ್ದ ಗೃಹಲಕ್ಷ್ಮಿಯರು!