ಮಾಜಿ ಪ್ರಧಾನಿ ಇಂದಿರಾರನ್ನು ಬಂಧಿಸಿದ್ದ ಮಾಜಿ IPS ಅಧಿಕಾರಿ ನಿಧನ!

Published : Jun 24, 2019, 09:41 AM IST
ಮಾಜಿ ಪ್ರಧಾನಿ ಇಂದಿರಾರನ್ನು ಬಂಧಿಸಿದ್ದ ಮಾಜಿ IPS ಅಧಿಕಾರಿ ನಿಧನ!

ಸಾರಾಂಶ

ಭ್ರಷ್ಟಾಚಾರ ಕೇಸಲ್ಲಿ ಮಾಜಿ ಪ್ರಧಾನಿ ಇಂದಿರಾ ಬಂಧಿಸಿದ್ದ ಲಕ್ಷ್ಮೀನಾರಾಯಣನ್‌ ನಿಧನ

ಚೆನ್ನೈ[ಜೂ.24]: ಭ್ರಷ್ಟಾಚಾರದ ಆರೋಪದ ಪ್ರಕರಣದಲ್ಲಿ ಮಾಜಿ ಪ್ರಧಾನಿ ಇಂದಿರಾಗಾಂಧಿ ಅವರನ್ನೇ ಬಂಧಿಸಿದ್ದ ತಮಿಳುನಾಡು ಮೂಲದ ಮಾಜಿ ಡಿಜಿಪಿ ವಿ.ಆರ್‌. ಲಕ್ಷ್ಮೀನಾರಾಯಣನ್‌ ಅವರು ಭಾನುವಾರ ಕೊನೆಯುಸಿರೆಳೆದಿದ್ದಾರೆ.

ಕಳೆದ ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಲಕ್ಷ್ಮೀನಾರಾಯಣನ್‌ (91) ಓರ್ವ ಪುತ್ರ, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. 1951ನೇ ಬ್ಯಾಚ್‌ನ ಐಪಿಎಸ್‌ ಅಧಿಕಾರಿಯಾಗಿದ್ದ ಲಕ್ಷ್ಮೀನಾರಾಯಣನ್‌ ಅವರನ್ನು ಎಲ್ಲರೂ ಪ್ರೀತಿಯಿಂದ ವಿಆರ್‌ಎಲ್‌ ಎಂದೇ ಕರೆಯುತ್ತಿದ್ದರು. ಮದುರೈನ ಸಹಾಯಕ ಅಧೀಕ್ಷಕರಾಗಿ ಅಧಿಕಾರ ವಹಿಸಿಕೊಂಡ ಲಕ್ಷ್ಮೀನಾರಾಯಣನ್‌ ಬಳಿಕ ಸಿಬಿಐನ ಜಂಟಿ ನಿರ್ದೇಶಕರಾಗಿದ್ದರು. ಇದೇ ಅವಧಿಯಲ್ಲಿ ಅಂದರೆ 1977ರಲ್ಲಿ ಭ್ರಷ್ಟಾಚಾರ ಪ್ರಕರಣವೊಂದರಲ್ಲಿ ಇಂದಿರಾ ಅವರನ್ನು ಬಂಧಿಸುವಂತೆ ಕೋರ್ಟ್‌ ಆದೇಶಿಸಿತ್ತು.

ಅದರನ್ವಯ ಇಂದಿರಾರನ್ನು ಲಕ್ಷ್ಮೀನಾರಾಯಣನ್‌ ಅವರು ಬಂಧಿಸಿದ್ದರು. ಲಕ್ಷ್ಮೀನಾರಾಯಣನ್‌ ಅವರು ಸ್ವತಂತ್ರ ಭಾರತದ ಮೊದಲ ಪ್ರಧಾನಿ ಜವಾಹರಲಾಲ್‌ ನೆಹರೂ ಅವರಷ್ಟೇ ಅಲ್ಲದೆ, ಇಂದಿರಾಗಾಂಧಿ, ಚರಣ್‌ ಸಿಂಗ್‌ ಹಾಗೂ ಮೊರಾರ್ಜಿ ಅವರ ಆಡಳಿತಾವಧಿಯಲ್ಲೂ ಕಾರ್ಯ ನಿರ್ವಹಿಸಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
ನಮ್ಮನ್ನು ಗುಲಾಮರನ್ನಾಗಿಸಿ ಹಿಂದೂ ಧರ್ಮ ಸೃಷ್ಟಿಸಿದ್ದು ಬ್ರಾಹ್ಮಣರು: ನಿವೃತ್ತ ಹೈಕೋರ್ಟ್ ನ್ಯಾಯಮೂರ್ತಿ