
ಬೆಂಗಳೂರು (ಡಿ.20): ಈಗಾಗಲೇ ಕಾಳಧನ ಹಾಗೂ ಅಕ್ರಮ ಆಸ್ತಿಯ ಸಂಕೋಲೆಗೆ ಸಿಲುಕುವ ಹೆದರಿಕೆಯಲ್ಲಿರುವ ಕಾಂಗ್ರೆಸ್ ಕೆಲ ಸಚಿವರಿಂದಾಗಿ ಕೈ ಕೈ ಹಿಚುಕಿಕೊಳ್ಳುವಂತಾಗಿದೆ.
ಇದಕ್ಕೆ ತಕ್ಕ ಉದಾಹರಣೆ ಎಂದರೆ ಮೈಸೂರಿನ ನಂಜನಗೂಡು ಉಪಚುನಾವಣೆಯಲ್ಲಿ ಕಾಂಗ್ರೆಸ್ ತನ್ನ ಲೆಕ್ಕಾಚಾರ ಬದಲಿಸುತ್ತಿರುವುದು. ಈವರೆಗೆ ಹೆಚ್.ಸಿ. ಮಹದೇವಪ್ಪ ಪುತ್ರ ಸುನೀಲ್ ಬೋಸ್ನನ್ನು ಕಾಂಗ್ರೆಸ್ ತನ್ನ ಅಭ್ಯರ್ಥಿಯನ್ನಾಗಿ ಬಿಂಬಿಸಿತ್ತು.
ಆದರೆ ಇತ್ತೀಚೆಗೆ ಜಾರಿ ನಿರ್ದೇಶನಾಲಯ, ಸಿಬಿಐ ಸೇರಿದಂತೆ ಎಸಿಬಿ ದಾಳಿಗಳಲ್ಲಿ ಹೆಚ್.ಸಿ. ಮಹದೇವಪ್ಪ ಆಪ್ತರೇ ಸಿಕ್ಕಿಬಿದ್ದಿರುವುದರಿಂದ ಮುಂದೆ ಹೆಚ್.ಸಿ. ಮಹದೇವಪ್ಪ ಅವರಿಗೂ ಕಳಂಕ ಅಂಟಿಕೊಳ್ಳುವುದರ ಬಗ್ಗೆ ಕಾಂಗ್ರೆಸ್'ಗೆ ಸುಳಿವು ಸಿಕ್ಕಂತಿದೆ.
ಹಾಗಾಗಿ ಹೆಚ್.ಸಿ. ಮಹದೇವಪ್ಪ ಪುತ್ರ ಸುನೀಲ್ ಬೋಸ್ ಬದಲಾಗಿ ಚಾಮರಾಜನಗರ ಸಂಸದ ಧ್ರುವನಾರಾಯಣ್ ಅವರನ್ನು ನಂಜನಗೂಡು ಉಪಚುನಾವಣೆಯಲ್ಲಿ ಕಣಕ್ಕಿಳಿಸಲು ಕಾಂಗ್ರೆಸ್ ಬಹುತೇಕ ನಿರ್ಧರಿಸಿದೆ ಎಂದು ಬಲ್ಲ ಮೂಲಗಳು ತಿಳಿಸಿವೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.