ದೇಶದ ಮುಂದಿನ ರಾಷ್ಟ್ರಪತಿಯಾಗಿ ದ್ರೌಪದಿ ಮುರ್ಮು?

Published : May 02, 2017, 01:30 PM ISTUpdated : Apr 11, 2018, 12:40 PM IST
ದೇಶದ ಮುಂದಿನ ರಾಷ್ಟ್ರಪತಿಯಾಗಿ ದ್ರೌಪದಿ ಮುರ್ಮು?

ಸಾರಾಂಶ

ಈ ನಡುವೆ ಪ್ರಧಾನಿ ಮೋದಿ ಇಡೀ ದೇಶಕ್ಕೆ ‘ಸರ್ಪ್ರೈಸ್’ ನೀಡುವ ಯೊಚನೆಯಲ್ಲಿದ್ದಾರೆಂದು ಹೇಳಲಾಗಿದೆ.

ಮುಂಬರವ ಜುಲೈಯಲ್ಲಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿಯವರ ಅಧಿಕಾರಾವಧಿ ಮುಗಿಯಲಿದ್ದು, ಮುಂದಿನ ರಾಷ್ಟ್ರಪತಿ ಯಾರಾಗಬಹುದೆಂಬ ಬಗ್ಗೆ ಚರ್ಚೆ ನಡೆಯುತ್ತಿದೆ. ಆ ನಡುವೆ ಪ್ರಧಾನಿ ಮೋದಿ ಇಡೀ ದೇಶಕ್ಕೆ ‘ಸರ್ಪ್ರೈಸ್’ ನೀಡುವ ಯೊಚನೆಯಲ್ಲಿದ್ದಾರೆಂದು ಹೇಳಲಾಗಿದೆ. ಮುಂದಿನ ರಾಷ್ಟ್ರಪತಿ ಅಭ್ಯರ್ಥಿಯಾಗಿ ಆದಿವಾಸಿ ಮಹಿಳೆ ದ್ರೌಪದಿ ಮುರ್ಮು ಅವರನ್ನುಕಣಕ್ಕಿಳಿಸಲು ಅವರು ಚಿಂತನೆ ನಡೆಸುತ್ತಿದ್ದಾರೆಂದು ಪೋಸ್ಟ್’ಕಾರ್ಡ್ ವರದಿ ಮಾಡಿದೆ. ಹಾಲಿ ಜಾರ್ಖಂಡ್’ನ ರಾಜ್ಯಪಾಲೆಯಾಗಿರುವ ದ್ರೌಪದಿ ಮುರ್ಮು  ಹಿಂದೆ ಒಡಿಶಾದಲ್ಲಿ ಸಚಿವರಾಗಿ ಕಾರ್ಯನಿರ್ವಹಿಸಿದ್ದಾರೆ.

ಯಾರಿದು ದ್ರೌಪದಿ ಮುರ್ಮು?

ಒಡಿಶಾದ ಮಯೂರ್’ಭಂಜ್  ಜಿಲ್ಲೆಯ ಆದಿವಾಸಿ ಕುಟುಂಬದಿಂದ ಬಂದ ದ್ರೌಪದಿ ಮುರ್ಮು ಕಳೆದ 20 ವರ್ಷಗಳಿಂದ ಸಾಮಾಜಿಕ ಹಾಗೂ ರಾಜಕೀಯ ರಂಗದಲ್ಲಿ ಸಕ್ರಿಯರಾಗಿದ್ದಾರೆ. ದ್ರೌಪದಿ ಮುರ್ಮು ಒಡಿಶಾದಿಂದ ರಾಜ್ಯಪಾಲೆಯಾಗಿ ನೇಮಕವಾದ ಪ್ರಪಥಮ ಮಹಿಳೆಯಾಗಿದ್ದಾರಲ್ಲದೇ , ಜಾರ್ಖಂಡ್ ರಾಜ್ಯದ ಪ್ರಪಥಮ ಮಹಿಳಾ ರಾಜ್ಯಪಾಲೆ ಕೂಡಾ ಆಗಿದ್ದಾರೆ.

ಒಡಿಶಾದಲ್ಲಿ ಬಿಜೆಪಿ-ಬಿಜೆಡಿ ಮೈತ್ರಿಕೂಟದ ಸರ್ಕಾರವಿದ್ದಾಗ ಮುರ್ಮು ಸಚಿವರಾಗಿ ಕಾರ್ಯನಿರ್ವಹಿಸಿದ್ದಾರೆ. ವಾಣಿಜ್ಯ ಹಾಗೂ ಸಾರಿಗೆ  ಸಚಿವರಾಗಿ 6 ಮಾರ್ಚ್ 2000 ರಿಂದ 6 ಆಗಸ್ಟ್ 2002ರವರೆಗೆ, ಹಾಗೂ 6 ಆಗಸ್ಟ್ 2002ರಿಂದ 16 ಮೇ 2004ರವರೆಗೆ ಮೀನುಗಾರಿಕಾ ಮತ್ತು ಪಶು ಸಂಪನ್ಮೂಲ ಸಚಿವರಾಗಿ ದುಡಿದಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕಿತ್ತೂರು ಕರ್ನಾಟಕ ಹೆಸರಲ್ಲಿ ಪ್ರತ್ಯೇಕ ರಾಜ್ಯವಾಗಲಿ: ಶಾಸಕ ರಾಜು ಕಾಗೆ ಆಗ್ರಹ
ಸಿಎಂ ಸಿದ್ದರಾಮಯ್ಯ ಹೇಳಿಕೆಯೇ ನಮಗೆ ಅಂತಿಮ ಮಾರ್ಗದರ್ಶನ: ಸಚಿವ ದಿನೇಶ್ ಗುಂಡೂರಾವ್