
ನವದೆಹಲಿ: ತಮಿಳುನಾಡಿನಲ್ಲಿ ಐಸಿಸ್ ಉಗ್ರ ಸಂಘಟನೆಯ ಮಾದರಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಮಹಮ್ಮದ್ ಅಜರುದ್ದೀನ್ ಎಂಬಾತನನ್ನು ಎನ್ಐಎ ಬುಧವಾರ ತಮಿಳುನಾಡಿನಲ್ಲಿ ಬಂಧಿಸಿದೆ. ಖಚಿತ ಮಾಹಿತಿ ಮೇರೆಗೆ ತಮಿಳುನಾಡಿನ ಕೊಯಮತ್ತೂರಿನ ವಿವಿಧ ಪ್ರದೇಶಗಳ ಮೇಲೆ ದಾಳಿ ನಡೆಸಿದ್ದ ಎನ್ಐಎ ಅಧಿಕಾರಿಗಳ ತಂಡ ಅಜರುದ್ದೀನ್ನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ. ಈತ, ಇತ್ತೀಚೆಗೆ ಶ್ರೀಲಂಕಾದಲ್ಲಿ ನಡೆದ ಸರಣಿಸ ಫೋಟ ಪ್ರಕರಣದ ರೂವಾರಿ ಎನ್ನಲಾದ ಝಹ್ರಾನ್ ಹಶೀಮ್ ಜೊತೆ ಫೇಸ್ಬುಕ್ ಸ್ನೇಹಿತನಾಗಿದ್ದ.
ದಾಳಿ ವೇಳೆ ಎನ್ಐಎ ಅಧಿಕಾರಿಗಳು 14 ಮೊಬೈಲ್, 29 ಸಿಮ್ಕಾರ್ಡ್, 10 ಪೆನ್ಡ್ರೈವ್, 3 ಲ್ಯಾಪ್ಟಾಪ್, 6 ಮೆಮೊರಿ ಕಾರ್ಡ್, 4 ಹಾರ್ಡ್ಡಿಸ್ಕ್, 13 ಸಿಡಿ/ ಡಿವಿಸಿ, 300 ಏರ್ಗನ್ ಪೆಲ್ಲೆಟ್ಸ್ ಮತ್ತು ಭಾರೀ ಪ್ರಮಾಣದ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ. ಜೊತೆಗೆ ದಾಳಿ ಸ್ಥಳದಲ್ಲಿ ಪಿಎಫ್ಎ ಮತ್ತು ಎಸ್ಡಿಪಿಐ ಸಂಘಟನೆಗೆ ಸೇರಿದ ಕರಪತ್ರಗಳೂ ಸಿಕ್ಕಿವೆ.
ಲಂಕಾ ಸ್ಫೋಟದಲ್ಲಿ ನಟ ಗಣೇಶ್ ಸ್ನೇಹಿತ ನಿಧನ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.