
ಮುಂಬೈ : ಬಾಲಿವುಡ್ ಬೋಲ್ಡ್ ತಾರೆ ಕಂಗನಾ ರಣೌತ್ ರಾಜಕೀಯದ ಬಗ್ಗೆ ತಮ್ಮ ಆಸಕ್ತಿಯನ್ನು ಹೊರ ಹಾಕಿದ್ದಾರೆ.
ಅಲ್ಲದೇ ದೇಶದಲ್ಲಿನ ಸಾಮಾಜಿಕ ಅಸಮಾನತೆಗಳ ಬಗ್ಗೆಯೂ ಕೂಡ ತಮ್ಮ ಕಾಳಜಿಯನ್ನು ವ್ಯಕ್ತಪಡಿಸಿದ್ದಾರೆ. ಇದರಿಂದ ಅವರು ದೇಶದ ರಾಜಕೀಯಕ್ಕೆ ಪ್ರವೇಶ ಮಾಡಬಹುದು ಎನ್ನುವ ಮುನ್ಸೂಚನೆಯೊಂದು ದೊರಕಿದೆ.
ಅಲ್ಲದೇ ಶೀಘ್ರದಲ್ಲೇ ಆಕೆ ರಾಜಕೀಯಕ್ಕೆ ಪ್ರವೇಶ ಮಾಡಬಹುದು ಎನ್ನುವುದು ಖಾಸಗಿ ಸುದ್ದಿವಾಹಿನಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ತಿಳಿದು ಬಂದಿದೆ.
ಯುವ ಪಡೆ ದೇಶದ ಆಡಳಿತ ನಡೆಸಬೇಕು. ದೇಶಕ್ಕೆ ಸೇವೆ ಸಲ್ಲಿಸುವ ಮನಸ್ಸು ತಮಗಿದೆ ಎನ್ನುವುದನ್ನು ತಿಳಿಸಿದ್ದಾರೆ. ಇದರಿಂದ ಶೀಘ್ರದಲ್ಲೇ ಬಾಲಿವುಡ್ ಕ್ಷೀನ್ ರಾಜಕೀಯ ಪ್ರವೇಶ ಮಾಡಬಹುದು ಎನ್ನುವ ಮುನ್ಸೂಚನೆಯೊಂದು ದೊರಕಿದಂತಾಗಿದೆ.
ಸದ್ಯ ಕಂಗನಾ ತಮ್ಮ ಮುಂದಿನ ಚಿತ್ರ ಮಣಿಕರ್ಣಿಕಾ ದ ಕ್ವೀನ್ ಬಿಡುಗಡೆಗೆ ಕಾತರರಾಗಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.