
ಪಣಜಿ[ಡಿ.22]: ಗೋವಾ ಸಿಎಂ ಮನೋಹರ್ ಪರ್ರಿಕರ್ ಜಿಗಣೆ ರೀತಿ ಸಿಎಂ ಹುದ್ದೆಗೆ ಅಂಟಿಕೊಂಡಿದ್ದಾರೆ. ಹುದ್ದೆಯಲ್ಲಿ ಮುಂದುವರೆಯುವ ಕಾರಣಕ್ಕಾಗಿಯೇ ಅವರು ರಫೇಲ್ ಖರೀದಿ ವಿಷಯವನ್ನು ಮುಂದಿಟ್ಟುಕೊಂಡು ಪ್ರಧಾನಿ ನರೇಂದ್ರ ಮೋದಿ ಅವರನ್ನು ಬ್ಲ್ಯಾಕ್ಮೇಲ್ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕ ಜೈಪಾಲ್ ರೆಡ್ಡಿ ಕೀಳು ಆರೋಪ ಮಾಡಿದ್ದಾರೆ.
ಕ್ಯಾನ್ಸರ್ನಿಂದ ಬಳಲುತ್ತಿರುವ ಪರ್ರಿಕರ್ ಅವರ ಬಗ್ಗೆ ರಾಜಕೀಯ ಕಾರಣಕ್ಕಾಗಿ ರೆಡ್ಡಿ ಮಾಡಿದ ಆರೋಪಕ್ಕೆ ಬಿಜೆಪಿ ನಾಯಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಫೇಲ್ ಕೇಸಲ್ಲಿ ಸರ್ಕಾರಕ್ಕೆ ಸುಪ್ರೀಂಕೋರ್ಟ್ ಕ್ಲಿನ್ಚಿಟ್ ಕೊಟ್ಟಿದ್ದರೂ, ಕಾಂಗ್ರೆಸ್ ಇನ್ನೂ ಹಗರಣದ ಜಪ ಮಾಡುತ್ತಿದೆ ಎಂದು ಕಿಡಿಕಾರಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ