
ಬೆಂಗಳೂರು(ಜು.25): ಅರಣ್ಯ ಹಾಗೂ ಪರಿಸರ ಖಾತೆ ಸಚಿವ ರಮಾನಾಥ್ ರೈ'ಗೆ ಗೃಹ ಖಾತೆ ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ನಿರ್ಧರಿಸಿದ್ದಾರೆ.
ಇಂದು ಸಂಜೆ ರೈ ಅವರನ್ನು ಭೇಟಿ ಮಾಡಿದ ಸಿಎಂ ಗೃಹ ಖಾತೆಯನ್ನು ಒಪ್ಪಿಕೊಳ್ಳುವಂತೆ ಸೂಚನೆ ನೀಡಿದ್ದಾರೆ. ಮೊದಮೊದಲು ಗೃಹಖಾತೆ ಬೇಡವೆಂದು ಸಿಎಂ'ಗೆ ರಮಾನಾಥ್ ಮನವಿ ಮಾಡಿದ್ದರು. ಆದರೆ ಹೈಕಮಾಂಡ್ ಜೊತೆ ಚರ್ಚಿಸಿ ನಿರ್ಧರಿಸುವುದಾಗಿ ರಮಾನಾಥ್ ರೈ'ಗೆ ಮನವರಿಕೆ ಮಾಡಲಾಗಿದೆ. ಸದ್ಯದಲ್ಲೇ ಹೈಕಮಾಂಡ್ ಜೊತೆ ಚರ್ಚಿಸಿ ಅಂತಿಮ ನಿರ್ಧಾರ ಕೈಕೊಳ್ಳಲಿದ್ದು, ಈ ವಾರದಲ್ಲಿ ಅಧಿಕೃತ ಪ್ರಕಟ ಸಾಧ್ಯತೆ ಎನ್ನಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.