
ಬೆಂಗಳೂರು(ಆ.26): ಮಾಜಿ ಸಂಸದೆ ರಮ್ಯಾ ಅವರು ಕ್ಷೇತ್ರ ಬದಲಾವಣೆಗೆ ಚಿಂತನೆ ನಡೆಸಿದ್ದಾರೆ. ಮುಂದಿನ ಚುನಾವಣೆಯಲ್ಲಿ ಕೆ.ಆರ್. ನಗರ ಅಥವಾ ಮೈಸೂರು ಕ್ಷೇತ್ರದ ಕಡೆ ವಲಸೆ ಹೋಗುವುದು ಕಾಂಗ್ರೆಸ್ ನಾಯಕಿಯ ಯೋಚನೆಯಾಗಿದೆ ಎನ್ನಲಾಗಿದೆ. ವಿಧಾನಸಭೆ'ಗೆ ಸ್ಪರ್ಧಿಸುವುದಾದರೆ ಕೆ.ಆರ್. ನಗರ ಕ್ಷೇತ್ರದಿಂದ ಅಥವಾ ಲೋಕಸಭೆಯಾದರೆ ಮೈಸೂರು ಕ್ಷೇತ್ರದಿಂದ ಸ್ಪರ್ಧಿಸುವ ಸಾಧ್ಯತೆಯಿದೆ.
ಎಐಸಿಸಿ ಮುಖಂಡರೊಂದಿಗೆ ಹೆಚ್ಚು ಆಪ್ತವಾಗಿರುವ ರಮ್ಯಾ ಅದರಲ್ಲೂ ಉಪಾಧ್ಯಕ್ಷರಾಗಿರುವ ರಾಹುಲ್ ಗಾಂಧಿಯವರೊಂದಿಗೆ ಹೆಚ್ಚು ಹತ್ತಿರವಾಗಿದ್ದಾರೆ. ಇತ್ತೀಚಿಗಷ್ಟೆ ರಾಹುಲ್ ಗಾಂಧಿ ರಮ್ಯಾ ಅವರನ್ನು ಕಾಂಗ್ರೆಸ್'ನ ಸಾಮಾಜಿಕ ಮಾಧ್ಯಮ ಉಸ್ತುವಾರಿಯನ್ನಾಗಿ ನೇಮಿಸಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.