ಭಾರತದ ಮೇಲೆ ದಾಳಿಗೆ ಹೊಸ ಉಗ್ರ ಪಡೆ

Published : Oct 06, 2017, 05:23 PM ISTUpdated : Apr 11, 2018, 12:41 PM IST
ಭಾರತದ ಮೇಲೆ ದಾಳಿಗೆ ಹೊಸ ಉಗ್ರ ಪಡೆ

ಸಾರಾಂಶ

‘ಹಲಾಲ್ ದಸ್ತಾ’ ಸೃಷ್ಟಿಸಿದ ಐಎಸ್‌ಐ | ಭಾರತೀಯ ಸೇನೆಯೇ ಇದರ ಗುರಿ

ನವದೆಹಲಿ: ಲಷ್ಕರ್ ಎ ತೊಯ್ಬಾ, ಜೈಷ್ ಎ ಮೊಹಮ್ಮದ್, ಹಿಜ್ಬುಲ್ ಮುಜಾಹಿದೀನ್’ನಂತಹ ಉಗ್ರ ಸಂಘಟನೆಗಳನ್ನು ಪೋಷಿಸಿ, ಭಾರತದ ಮೇಲೆ ದಾಳಿಗೆ ಛೂ ಬಿಡುತ್ತಿದ್ದ ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್‌ಐ, ಇದೀಗ ಹೊಸ ಉಗ್ರಗಾಮಿ ಸಂಘಟನೆಯೊಂದನ್ನು ಹುಟ್ಟುಹಾಕಿದೆ.

ಗಡಿ ನಿಯಂತ್ರಣ ರೇಖೆ (ಎಲ್‌ಒಸಿ)ಯಲ್ಲಿ ದಾಳಿ ನಡೆಸಿ ಭಾರತೀಯ ಸೇನೆಗೆ ಸಾಧ್ಯವಿರುವಷ್ಟೂ ಹಾನಿ ಉಂಟು ಮಾಡುವ ಗುರಿಯೊಂದಿಗೆ ‘ಹಲಾಲ್ ದಸ್ತಾ’ (ಹಂತಕ ಪಡೆ) ಎಂಬ ಸಂಘಟನೆಯೊಂದಕ್ಕೆ ಜನ್ಮ ನೀಡಿದೆ.

ನಿಷೇಧಿತ ಲಷ್ಕರ್ ಎ ತೊಯ್ಬಾ ಉಗ್ರಗಾಮಿ ಸಂಘಟನೆಯ ಸದಸ್ಯರೇ ಇದರಲ್ಲೂ ಸಕ್ರಿಯರಾಗಿರುತ್ತಾರೆ. ಪಾಕಿಸ್ತಾನದ ಗಡಿ ಭದ್ರತಾ ಪಡೆ ‘ಬಾರ್ಡರ್ ಆ್ಯಕ್ಷನ್ ಟೀಮ್’ (ಬ್ಯಾಟ್)ನೊಂದಿಗೆ ಸೇರಿ ಈ ಸಂಘಟನೆ ಭಾರತದ ವಿರುದ್ಧ ದಾಳಿಗಳನ್ನು ನಡೆಸಲಿದೆ.

ಜಮ್ಮು-ಕಾಶ್ಮೀರದ ಸುರಾನ್‌ಕೋಟ್ ಹಾಗೂ ಪೂಂಛ್ ಜಿಲ್ಲೆಗಳಲ್ಲಿರುವ ಗಡಿ ನಿಯಂತ್ರಣ ರೇಖೆಯ ಮೇಲೆ ದಾಳಿ ನಡೆಸಿ, ಭಾರತೀಯ ಸೇನೆಗೆ ಸಾಧ್ಯವಾದಷ್ಟೂ ಹಾನಿ ಮಾಡುವುದು ಈ ಸಂಘಟನೆಯ ಮುಖ್ಯ ಗುರಿ.

ದಾಳಿಗೆ ನೀಲನಕ್ಷೆ ರೂಪಿಸುವ ಸಲುವಾಗಿ ಐಎಸ್‌ಐ ಅಧಿಕಾರಿಗಳು ಲಷ್ಕರ್ ಎ ತೊಯ್ಬಾ ಹಾಗೂ ಹಿಜ್ಬುಲ್ ಮುಜಾಹಿದೀನ್ ಕಮಾಂಡರ್‌ಗಳ ಜತೆ ಸಮಾಲೋಚನೆ ನಡೆಸಿದ್ದಾರೆ. ಈ ಸಭೆಯಲ್ಲಿ ಜೈಷ್ ಎ ಮೊಹಮ್ಮದ್ ಮುಖ್ಯಸ್ಥ ಸೈಯದ್ ಸಲಾಹುದ್ದೀನ್ ಕೂಡ ಉಪಸ್ಥಿತನಿದ್ದ ಎಂದು ಮೂಲಗಳನ್ನು ಉಲ್ಲೇಖಿಸಿ ಟೀವಿ ಚಾನೆಲೊಂದು ವರದಿ ಮಾಡಿದೆ.

ಐಎಸ್‌ಐಗೆ ಉಗ್ರಗಾಮಿ ಸಂಘಟನೆಗಳ ಜತೆ ನಂಟಿದೆ. ತನ್ನದೇ ಆದ ವಿದೇಶಾಂಗ ನೀತಿಯನ್ನು ಆ ಸಂಸ್ಥೆ ಹೊಂದಿದೆ ಎಂದು ಅಮೆರಿಕದ ಉನ್ನತಾಧಿಕಾರಿಗಳು ಹೇಳಿದ ಬೆನ್ನಲ್ಲೇ ಐಎಸ್‌ಐ ಹೊಸ ಸಂಘಟನೆ ಸೃಷ್ಟಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಬಾಗಲಕೋಟೆ: ಬುದ್ಧಿಮಾಂದ್ಯನ ಮೇಲೆ ಅಮಾನವೀಯ ಹಲ್ಲೆ
ವೀರವೈಶ ಲಿಂಗಾಯತ ಸಮಾಜ ಒಡೆದಾಳಲು ಯತ್ನ: ವಿಜಯೇಂದ್ರ