
ಲಂಬಿ/ಪಂಜಾಬ್ (ಫೆ.04): ಆಪ್ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ವಿರುದ್ಧ ಕೇಂದ್ರ ಸಚಿವೆ ಹರ್ಸಿಮ್ ರಾತ್ ಕೌರ್ ವಾಗ್ದಾಳಿ ನಡೆಸಿದ್ದಾರೆ. ಆಪ್ ಚಟುವಟಿಕೆಗಳನ್ನು ನೋಡಿದರೆ ಪಾಕ್ ಐಎಸ್ ಐ ಆಪ್ ಪಕ್ಷವನ್ನು ಪೋಷಿಸುತ್ತಿದೆ ಎಂದು ಆರೋಪಿಸಿದ್ದಾರೆ.
ರಾಷ್ಟ್ರ ರಾಜಧಾನಿಗೆ ಅರವಿಂದ್ ಕೇಜ್ರಿವಾಲ್ ಏನೂ ಒಳ್ಳೆಯ ಕೆಲಸ ಮಾಡಿಲ್ಲ. ಈಗ ಪಂಜಾಬ್ ನತ್ತ ಮುಖ ಮಾಡಿದ್ದಾರೆ. ಶಿರೋಮಣಿ ಅಕಾಲಿ ದಳ-ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ ಬರಲಿದೆ ಎಂದು ಕೌರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಅರವಿಂದ್ ಕೇಜ್ರಿವಾಲ್ ಪಂಜಾಬ್ ನ ಶಾಂತಿಯನ್ನು ಕದಡಲು ಪ್ರಯತ್ನಿಸುತ್ತಿದ್ದಾರೆ. ಇವರ ಪಕ್ಷದ ಸಂಸದರು ಜನರನ್ನು ಎತ್ತಿಕಟ್ಟುತ್ತಿದ್ದಾರೆ. ಸ್ವತಃ ಕೇಜ್ರಿವಾಲ್ ಮಾಜಿ ಭಯೋತ್ಪಾದಕ ಖಾಲ್ಸಾ ಜೊತೆ ತಿಂಡಿ, ಊಟ ಮಾಡಿದ್ದನ್ನು ನೋಡಿದರೆ ಪಾಕ್ ಐಎಸ್ ಐ ಆಪ್ ಹಾಗೂ ಖಾಲ್ಸಾರನ್ನು ಪೋಷಿಸುತ್ತಿದೆ ಎಂದು ಕೌರ್ ಆರೋಪಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.