ರಾಮಮಂದಿರಕ್ಕಾಗಿ ಜೈಲಿಗೆ ಹೋಗಲೂ ಸಿದ್ಧ

Published : Apr 08, 2017, 05:57 PM ISTUpdated : Apr 11, 2018, 01:06 PM IST
ರಾಮಮಂದಿರಕ್ಕಾಗಿ ಜೈಲಿಗೆ ಹೋಗಲೂ ಸಿದ್ಧ

ಸಾರಾಂಶ

ಉಮಾಭಾರತಿ ಸೇರಿದಂತೆ ಬಾಬ್ರಿ ಮಸೀದಿ ಧ್ವಂಸ ಪ್ರಕರಣದಲ್ಲಿ 13 ಆಪಾದಿತರ ವಿರುದ್ಧ ಪ್ರಕರಣ ವಾಪಸು ತೆರೆಯುವ ಬಗ್ಗೆ ಸರ್ವೋಚ್ಚ ನ್ಯಯಾಲಯದಲ್ಲಿ ವಿಚಾರಣೆ ನಡೆಯುತ್ತಿದ್ದು, ಇತ್ತೀಚೆಗೆ ನ್ಯಾಯಾಲಯ ತೀರ್ಪು ಕಾಯ್ದಿರಿಸಿತ್ತು. ಅದರ ಬೆನ್ನಲ್ಲೇ ಉಮಾ ಅವರ ಈ ಹೇಳಿಕೆ ಬಂದಿದೆ.

ಲಖನೌ(ಏ.08): ರಾಮಮಂದಿರ ತಮ್ಮ ನಂಬಿಕೆಯ ವಿಷಯ, ಅದಕ್ಕಾಗಿ ತಾವು ಜೈಲಿಗೆ ಹೋಗಲೂ ಸಿದ್ಧ ಎಂದು ಕೇಂದ್ರ ಜಲ ಸಂಪನ್ಮೂಲ ಸಚಿವೆ ಸಾದ್ವಿ ಉಮಾ ಭಾರತಿ ಹೇಳಿದ್ದಾರೆ.

ಶನಿವಾರ ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್‌ರನ್ನು ಭೇಟಿಯಾದ ಉಮಾ ಭಾರತಿ, ಬಳಿಕ ಸುದ್ದಿಗಾರರ ಜೊತೆ ಮಾತನಾಡಿ, ‘ರಾಮ ಮಂದಿರ ನನಗೆ ನಂಬಿಕೆಯ ವಿಷಯ ಮತ್ತು ಆ ಬಗ್ಗೆ ನನಗೆ ಅಪಾರ ಹೆಮ್ಮೆಯಿದೆ. ಅದಕ್ಕಾಗಿ ಜೈಲಿಗೆ ಹೋಗಬೇಕಾದಲ್ಲಿ ನಾನು ಜೈಲಿಗೂ ಹೋಗಬಲ್ಲೆ, ಸ್ವಯಂ ನೇಣಿಗೇರಬೇಕಾದರೂ, ನಾನು ಅದನ್ನು ಮಾಡಬಲ್ಲೆ’ ಎಂದು ಅವರು ಹೇಳಿದರು.

‘ವಿಷಯ ನ್ಯಾಯಾಲಯದಲ್ಲಿರುವುದರಿಂದ ಈ ಬಗ್ಗೆ ಹೆಚ್ಚು ಮಾತನಾಡಲು ಬಯಸುವುದಿಲ್ಲ’ ಎಂದು ಅವರು ಸ್ಪಷ್ಟಪಡಿಸಿದರು.

ಉಮಾಭಾರತಿ ಸೇರಿದಂತೆ ಬಾಬ್ರಿ ಮಸೀದಿ ಧ್ವಂಸ ಪ್ರಕರಣದಲ್ಲಿ 13 ಆಪಾದಿತರ ವಿರುದ್ಧ ಪ್ರಕರಣ ವಾಪಸು ತೆರೆಯುವ ಬಗ್ಗೆ ಸರ್ವೋಚ್ಚ ನ್ಯಯಾಲಯದಲ್ಲಿ ವಿಚಾರಣೆ ನಡೆಯುತ್ತಿದ್ದು, ಇತ್ತೀಚೆಗೆ ನ್ಯಾಯಾಲಯ ತೀರ್ಪು ಕಾಯ್ದಿರಿಸಿತ್ತು. ಅದರ ಬೆನ್ನಲ್ಲೇ ಉಮಾ ಅವರ ಈ ಹೇಳಿಕೆ ಬಂದಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಶಾಲಾ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ: ಶಿಕ್ಷಕನಿಗೆ ಪೋಷಕರಿಂದ ಧರ್ಮದೇಟು!
ವೇದಿಕೆಯಲ್ಲಿ ವಧು ಸದ್ದಿಲ್ಲದೆ ಮಾಡಿದ ಅದೊಂದು ಕೆಲಸ ಇಂಟರ್‌ನೆಟ್‌ನಲ್ಲಿ ಫುಲ್ ವೈರಲ್ ಆಯ್ತು..