
ಬೆಂಗಳೂರು(ನ.05): ಇಂಧನ ಸಚಿವ ಡಿ.ಕೆ.ಶಿವಕುಮಾರ್ ಅವರಿಗೆ ಮತ್ತೆ ಐಟಿ ಕಿರಿಕಿರಿ ಆರಂಭವಾಗಿದೆ. ಕುಟುಂಬ ಸಮೇತರಾಗಿ ವಿಚಾರಣೆಗೆ ಹಾಜರಾಗುವಂತೆ ಏಳನೇ ಬಾರಿಗೆ ಐಟಿ ನೋಟಿಸ್ ನೀಡಿದೆ. ಲೆಕ್ಕ ಪರಿಶೋಧಕರನ್ನು ಜತೆಯಲ್ಲಿ ಕರೆ ತರುವುದಕ್ಕೆ ಐಟಿ ನಿರಾಕರಿಸಿದೆ.
ಶನಿವಾರ ಬೆಳಗ್ಗೆ ಐಟಿ ಇಲಾಖೆ ಶಿವಕುಮಾರ್ ನಿವಾಸಕ್ಕೆ ಕಳುಹಿಸಿದ ನೋಟಿಸ್ನಲ್ಲಿ ಸೋಮವಾರ ಮಧ್ಯಾಹ್ನದ ಒಳಗಾಗಿ ಪತ್ನಿ ಉಷಾ, ತಾಯಿ ಗೌರಮ್ಮ ಹಾಗೂ ಇಬ್ಬರು ಪುತ್ರಿಯರ ಜತೆಗೆ ವಿಚಾರಣೆಗೆ ಹಾಜರಾಗಬೇಕು. ಆದರೆ ಈ ಸಂದರ್ಭದಲ್ಲಿ ನಿಮ್ಮ ಲೆಕ್ಕ ಪರಿಶೋಧಕರನ್ನು ಯಾವುದೇ ಕಾರಣಕ್ಕೂ ಕರೆ ತರುವಂತಿಲ್ಲ ಎಂದು ಸ್ಪಷ್ಟ ಸೂಚನೆ ನೀಡಲಾಗಿದೆ.
ಐಟಿ ದಾಳಿ ಬಳಿಕ ಒಟ್ಟು 6 ಬಾರಿ ಕುಟುಂಬ ಸಮೇತ ವಿಚಾರಣೆಗೆ ಹಾಜರಾಗಿದ್ದ ಶಿವಕುಮಾರ್, ಮತ್ತೆ ವಿಚಾರಣೆಗೆ ಹಾಜರಾಗುವುದಾಗಿ ತಿಳಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.