
ನವದೆಹಲಿ(ಮಾ.01): ಅಪನವದೀಕರಣ ಅವಧಿಯಲ್ಲಿ ಒಂದು ಕೋಟಿ ರು.ಗಿಂತಲೂ ಹೆಚ್ಚು ಹಣವನ್ನು ಬ್ಯಾಂಕ್ನಲ್ಲಿ ಠೇವಣಿ ಇರಿಸಿದ 200 ಖಾತೆದಾರರಿಗೆ ಆದಾಯ ತೆರಿಗೆ ಇಲಾಖೆ ನೋಟಿಸ್ ಜಾರಿ ಮಾಡಿದೆ.
ಅಪನಗದೀಕರಣ ಘೋಷಣೆಯ ಬಳಿಕ ತಮ್ಮ ಹಣ ಕೈಜಾರದಂತೆ ತಡೆಯಲು ಖಾತೆದಾದರು ವಿವಿಧ ಕುತಂತ್ರ ಮಾರ್ಗದ ಮೂಲಕ ಬ್ಯಾಂಕುಗಳಲ್ಲಿ ಭಾರಿ ಮೊತ್ತದ ಹಣವನ್ನು ಠೇವಣಿ ಇಟ್ಟಿದ್ದರು. ಈ ರೀತಿಯ ಬ್ಯಾಂಕ್ ಖಾತೆಗಳನ್ನು ಪರಿಶೀಲನೆ ನಡೆಸಲಾಗಿದ್ದು, ಸಂಪತ್ತಿನ ಮೂಲವನ್ನು ವಿವರಿಸುವಂತೆ ಸೂಚಿಸಲಾಗಿದೆ.
‘ಆರೇಷನ್ ಕ್ಲೀನ್ ಮನಿ’ ಎರಡನೇ ಹಂತದ ಕಾರ್ಯಾಚರಣೆಯನ್ನು ಮಾರ್ಚ್ನಿಂದ ಆರಂಭಿಸುವುದಾಗಿ ತೆರಿಗೆ ಇಲಾಖೆ ಕಳೆದ ವಾರ ತಿಳಿಸಿತ್ತು. ಅಪನಗದೀಕರಣ ಮತ್ತು ಅದಕ್ಕಿಂತ ಮುಂಚಿನ ಅವಯಲ್ಲಿ ಬ್ಯಾಂಕ್ ಖಾತೆಗಳಲ್ಲಿ ಠೇವಣಿಯ ವಿಶ್ಲೇಷಣೆಗೆ ಇಬ್ಬರು ಡೇಟಾ ವಿಶ್ಲೇಷಕರನ್ನು ನೇಮಿಸಿಕೊಳ್ಳಲಾಗುವುದು ತೆರಿಗೆ ಇಲಾಖೆ ತಿಳಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.