
ಬೆಂಗಳೂರು(ನ.11): ಆದಾಯ ತೆರಿಗೆ ಅಧಿಕಾರಿಗಳು ಬೆಂಗಳೂರಿನ ಪ್ರತಿಷ್ಠಿತ ಜ್ಯುವೆಲರಿ ಶಾಪ್'ಗಳು,ಫೈನಾನ್ಸಿಯರ್ ಮನೆಯಲ್ಲಿ ದಾಳಿ ನಡೆಸಿ ಕೋಟ್ಯಂತರ ಮೌಲ್ಯದ ವಸ್ತು ಜಪ್ತಿ ಮಾಡಿದ್ದಾರೆ. ಪ್ರತಿಷ್ಠಿತ ಜ್ಯುವೆಲರಿ ಕಂಪನಿಯ 3 ಶಾಖೆಗಳ ಮೇಲೆ ದಾಳಿ ನಡೆಸಿ 11 ಕೋಟಿ ರೂ. ಮೌಲ್ಯದ ವಸ್ತು, ಯಲಹಂಕದಲ್ಲಿ ಫೈನಾನ್ಸಿಯರ್ ಮನೆಯಲ್ಲಿ 16 ಕೋಟಿ ರೂ. ನಗದು, ವಶಪಡಿಸಿಕೊಂಡಿದ್ದಾರೆ.
ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನನಿಲ್ದಾಣದಲ್ಲಿ ನ.14 ರಂದು ಭುವನೇಶ್ವರದಿಂದ ಬೆಂಗಳೂರಿಗೆ ಪ್ರಯಾಣಿಸುತ್ತಿದ್ದ ವ್ಯಕ್ತಿ ಮೇಲೆ ದಾಳಿ ನಡಸಿ ಅಕ್ರಮವಾಗಿ ಸಾಗಿಸುತ್ತಿದ್ದ 1000 ಮುಖಬೆಲೆಯ 50 ಲಕ್ಷ ವಶ ಹಾಗೂ ನ.12 ರಂದು ಹೈದಾರಬಾದ್'ನಿಂದ ಬೆಂಗಳೂರಿಗೆ ಅಕ್ರಮವಾಗಿ 200 ಗ್ರಾಂ ಚಿನ್ನದ ಬಿಸ್ಕಟ್ನ್ನು ಸಾಗಿಸುತ್ತಿದ್ದ ವ್ಯಕ್ತಿಯೊಬ್ಬನನ್ನು ಬಂಧಿಸಿ ಚಿನ್ನದ ಬಿಸ್ಕತನ್ನು ವಶಪಡಿಸಿಕೊಂಡಿದ್ದಾರೆ.
ಮಂಗಳೂರಿನ 5 ಕೋ ಆಪರೇಟಿವ್ ಬ್ಯಾಂಕ್ಗಳ ಮೇಲೆ ಐಟಿ ದಾಳಿ ನಡೆಸಿರುವ ಐಟಿ ಅಧಿಕಾರಿಗಳು 8 ಕೋಟಿ ಹಣವನ್ನು ವಶಕ್ಕೆ ಪಡೆದಿದ್ದಾರೆ. ಈ ಬ್ಯಾಂಕ್'ಗಳು ಹಳೆ ನೋಟು ಪಡೆದು ಅಕ್ರಮವಾಗಿ ಹಣ ನೀಡುತ್ತಿದ್ದವು. ಅತಿ ಹೆಚ್ಚಿನ ಬೆಲೆಗೆ ಚಿನ್ನಾಭರಣ ಮಾರುತ್ತಿದ್ದ ಬೆಂಗಳೂರಿನ ಜ್ಯುವೆಲರಿ ಶಾಪ್ ಬಗ್ಗೆ ಸುವರ್ಣ ನ್ಯೂಸ್ ಎಕ್ಸ್ಲೂಸೀವ್ ವರದಿ ಪ್ರಸಾರ ಮಾಡಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.