ಸಿಎಂ ಆಪ್ತ ಸೇರಿ ನಾಲ್ವರ ಮನೆಗಳ ಮೇಲೆ ಐಟಿ ದಾಳಿ

Published : Nov 30, 2016, 06:22 PM ISTUpdated : Apr 11, 2018, 12:36 PM IST
ಸಿಎಂ ಆಪ್ತ ಸೇರಿ ನಾಲ್ವರ ಮನೆಗಳ ಮೇಲೆ ಐಟಿ ದಾಳಿ

ಸಾರಾಂಶ

ಧನಲಕ್ಷ್ಮಿ ಕೋ ಆಪರೇಟಿವ್ ಸೊಸೈಟಿ ವ್ಯವಸ್ಥಾಪಕ ಉಮಾಶಂಕರ್ ಹಾಗೂ ಹಿರಿಯ ಐಎಎಸ್ ಅಕಾರಿಯೊಬ್ಬ ಅವರ ಮನೆ ಹಾಗೂ ಕಚೇರಿಗಳ ಮೇಲೂ ಐಟಿ ಅಕಾರಿಗಳು ದಾಳಿ ನಡೆಸಿದ್ದು, ಕೆಲ ದಾಖಲೆ ಪತ್ರಗಳನ್ನು ಪರಿಶೀಲನೆ ನಡೆಸಿದ್ದಾರೆ ಎನ್ನಲಾಗಿದೆ.

ಬೆಂಗಳೂರು(ನ.30): ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತ ಎನ್ನಲಾದ ಕಾವೇರಿ ನಿಗಮದ ಮುಖ್ಯ ಎಂಜಿನಿಯರ್ ಚಿಕ್ಕರಾಯಪ್ಪ ಸೇರಿ ನಾಲ್ವರ ಮನೆ ಹಾಗೂ ಕಚೇರಿಗಳ ಮೇಲೆ ಆದಾಯ ತೆರಿಗೆ ಇಲಾಖೆ ಅಕಾರಿಗಳು ಬುಧವಾರ ದಾಳಿ ನಡೆಸಿ ಕೆಲ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ.

ಧನಲಕ್ಷ್ಮಿ ಕೋ ಆಪರೇಟಿವ್ ಸೊಸೈಟಿ ವ್ಯವಸ್ಥಾಪಕ ಉಮಾಶಂಕರ್ ಹಾಗೂ ಹಿರಿಯ ಐಎಎಸ್ ಅಕಾರಿಯೊಬ್ಬ ಅವರ ಮನೆ ಹಾಗೂ ಕಚೇರಿಗಳ ಮೇಲೂ ಐಟಿ ಅಕಾರಿಗಳು ದಾಳಿ ನಡೆಸಿದ್ದು, ಕೆಲ ದಾಖಲೆ ಪತ್ರಗಳನ್ನು ಪರಿಶೀಲನೆ ನಡೆಸಿದ್ದಾರೆ ಎನ್ನಲಾಗಿದೆ. ಕಪ್ಪು ಹಣ ಹಾಗೂ ಅಕ್ರಮ ಆಸ್ತಿಯ ಆರೋಪದ ಮಾಹಿತಿ ಆಧರಿಸಿ ಐಟಿ ಅಕಾರಿಗಳು ಸಂಜಯನಗರ, ಬಾಣಸವಾಡಿಯಲ್ಲಿರುವ ಮನೆ ಹಾಗೂ ಕಚೇರಿಗಳ ದಾಳಿ ನಡೆಸಿದ್ದಾರೆ. ಬೆಳಗ್ಗೆಯಿಂದ ಸಂಜೆವರೆಗೂ ದಾಖಲೆಗಳ ಪರಿಶೀಲನೆ ನಡೆಸಿ ಮಾಹಿತಿ ಸಂಗ್ರಹಿಸಿದ್ದಾರೆ ಎನ್ನಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಚಿನ್ನವಲ್ಲ, ಜಗತ್ತಿನಲ್ಲಿಯೇ ಗರಿಷ್ಠ ಬೆಳ್ಳಿ ಹೊಂದಿರುವ ದೇಶಗಳು ಇವು, ಭಾರತಕ್ಕೆ ಎಷ್ಟನೇ ಸ್ಥಾನ?
ಪ್ಯಾಸೆಂಜರ್‌ಗೆ ಮೂಗಿನ ಮೂಳೆ ಮುರಿಯುವಂತೆ ಹೊಡೆದ ಏರ್ ಇಂಡಿಯಾ ಪೈಲಟ್ ವಿರುದ್ಧ ಎಫ್‌ಐಆರ್‌