
ಜಮ್ಮು(ನ.07): ಸ್ವತಂತ್ರ ಪೂರ್ವದಿಂದ ಪಾಲಿಸಿಕೊಂಡು ಬಂದಿರುವ ಸಂಪ್ರದಾಯದಂತೆ ಜಮ್ಮು-ಕಾಶ್ಮೀರದ ಸಿಎಂ ಮುಫ್ತಿ ಮೆಹಬೂಬಾ ನೇತೃತ್ವದ ಆಡಳಿತ ಬೇಸಿಗೆ ರಾಜಧಾನಿ ಶ್ರೀನಗರದಿಂದ ಜಮ್ಮುವಿಗೆ ವರ್ಗಾವಣೆಯಾಗಿ ಕಾರ್ಯಾರಂಭ ಮಾಡಿದೆ. ಈ ಪ್ರಕಾರವಾಗಿ ಸೋಮವಾರ ಜಮ್ಮುವಿನಲ್ಲಿರುವ ಆಡಳಿತ ಕಚೇರಿ, ರಾಜಭವನ, ಪೊಲೀಸ್ ಕೇಂದ್ರ ಕಚೇರಿ ಮತ್ತು ಇತರೆ ಕಚೇರಿಗಳನ್ನು ತೆರೆಯಲಾಯಿತು. ಈ ಸಂದರ್ಭದಲ್ಲಿ ಜಮ್ಮು-ಕಾಶ್ಮೀರದ ಜನತೆಯ ಆಶೋತ್ತರಗಳನ್ನು ಈಡೇರಿಸುವಲ್ಲಿ ಪಿಡಿಪಿ-ಬಿಜೆಪಿ ಮೈತ್ರಿ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ ಎಂದು ಆರೋಪಿಸಿ ಕಾಂಗ್ರೆಸ್ ಪಕ್ಷ ಪ್ರತಿಭಟನೆ ಹಮ್ಮಿಕೊಂಡಿತು. ಜಮ್ಮು-ಕಾಶ್ಮೀರದ ಮೂರು ಪ್ರಾಂತ್ಯಗಳಲ್ಲಿರುವ ಎಲ್ಲ ವರ್ಗದ ಜನರನ್ನು ತಲುಪಲು ಸಾಧ್ಯವಾಗುವಂತೆ ಅಭಿವೃದ್ಧಿ ಕಾರ್ಯಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ಡಿಸಿಎಂ ಡಾ.ನಿರ್ಮಲಾ ಸಿಂಗ್ ಹೇಳಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.