ಜಮ್ಮು ಕಾಶ್ಮೀರ ರಾಜ್ಯಪಾಲರಿಗೆ ಉಗ್ರ ಸತ್ತರೂ ನೋವಾಗುತ್ತಂತೆ!

Published : Jan 24, 2019, 07:55 PM IST
ಜಮ್ಮು ಕಾಶ್ಮೀರ ರಾಜ್ಯಪಾಲರಿಗೆ ಉಗ್ರ ಸತ್ತರೂ ನೋವಾಗುತ್ತಂತೆ!

ಸಾರಾಂಶ

ಜಮ್ಮು ಮತ್ತು ಕಾಶ್ಮೀರ ರಾಜ್ಯಪಾಲರ ವಿವಾದಾತ್ಮಕ ಹೇಳಿಕೆ| ಕಣಿವೆಯಲ್ಲಿ ಭಯೋತ್ಪಾದಕ ಸತ್ತರೂ ನೋವಾಗುತ್ತೆ ಎಂದ ಸತ್ಯಪಾಲ್ ಮಲಿಕ್| ಶಾಂತಿ ಸ್ಥಾಪನೆಯಲ್ಲಿ ಭದ್ರತಾಪಡೆಗಳ ಪಾತ್ರ ಮಹತ್ವದ್ದು ಎಂದ ಮಲಿಕ್| ಹಿಂಸಾಚಾರ ಬಿಟ್ಟು ಸಮಾಜದ ಮುಖ್ಯವಾಹಿನಿಗೆ ಬರವಂತೆ ಕರೆ

ಶ್ರೀನಗರ(ಜ.24): ಕಣಿವೆಯಲ್ಲಿ ಸೈನಿಕ ಮಾತ್ರವಲ್ಲ, ಓರ್ವ ಭಯೋತ್ಪಾದಕ ಸತ್ತರೂ ನೋವಾಗುತ್ತದೆ ಎಂದು ಜಮ್ಮು-ಕಾಶ್ಮೀರ ರಾಜ್ಯಪಾಲ ಸತ್ಯಪಾಲ್ ಮಲಿಕ್ ಹೇಳಿದ್ದಾರೆ. 

ಹಿಂಸಾಚಾರ ಬಿಟ್ಟು ಸಮಾಜದ ಮುಖ್ಯ ವಾಹಿನಿಗೆ ಬರುವಂತೆ ಇದೇ ವೇಳೆ ಸತ್ಯಪಾಲ್ ಮಲಿಕ್ ದಂಗೆಕೋರರಿಗೆ ಕರೆ ನೀಡಿದ್ದಾರೆ.

ತಮ್ಮ ಆಡಳಿತ ಯಂತ್ರ ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದಕರ ಪುನರ್ವಸತಿ ಪ್ಯಾಕೇಜ್ ನ್ನು ರೂಪಿಸುವಲ್ಲಿ ಕಾರ್ಯನಿರತವಾಗಿದೆ ಎಂದು ಮಲಿಕ್ ತಿಳಿಸಿದ್ದಾರೆ. 

ಪೊಲೀಸರು ತಮ್ಮ ಕರ್ತವ್ಯವನ್ನು ಸಾಧ್ಯವಾದಷ್ಟೂ ಯಶಸ್ವಿಯಾಗಿ ನಿರ್ವಹಿಸುತ್ತಿದ್ದಾರೆ.  ಆದರೆ ಓರ್ವ ಭಯೋತ್ಪಾದಕ ಮೃತಪಟ್ಟರೂ ನೋವುಂಟಾಗುತ್ತದೆ. ಭಯೋತ್ಪಾದಕರು ಹಿಂಸಾಚಾರ ಬಿಟ್ಟು ಮುನ್ನೆಲೆಗೆ ಬರಬೇಕು ಎಂದು ಮಲಿಕ್ ಹೇಳಿದ್ದಾರೆ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಗ್ಯಾಸ್ ಸಿಲಿಂಡರ್ ಸ್ಫೋಟ: ಗೋವಾ ಕ್ಲಬ್‌ನಲ್ಲಿ ಅಗ್ನಿ ಅವಘಡ, 23 ಸಾವು
ಚಿಕ್ಕಮಗಳೂರು ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಗೌಡ ಹಂತಕರನ್ನು ಸುಮ್ಮನೆ ಬಿಡಲ್ಲ: ಸಿಎಂ ಡಿಸಿಎಂ